3:22 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

01/10/2023, 12:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಆದ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ಕೆಜೆ ಹಳ್ಳಿ-ಡಿಜೆಹಳ್ಳಿ ಕೇಸಲ್ಲಿ ಅವರದ್ದೇ ಶಾಸಕರಿಗೆ ಕಾಂಗ್ರೆಸ್ ಬೆಂಬಲ ಕೊಡ್ಲಿಲ್ಲ. ಕಾಂಗ್ರೆಸ್ ಶಾಸಕರ ಮನೆ ಸುಟ್ರು ಯಾರೂ ಹೋಗಲಿಲ್ಲ, ನಾವೇ ಹೋಗಿದ್ದು. ಕಾಂಗ್ರೆಸ್ ತನ್ನ ಶಾಸಕರಿಗೆ ನೈತಿಕ ಬೆಂಬಲವನ್ನೂ ಕೊಡ್ಲಿಲ್ಲ ಎಂದರು.
ಅಲ್ಲಿ ತಪ್ಪು ಮಾಡಿದ್ದಾರೆ ಎಂದು ಕಾಂಗ್ರೆಸ್ಸಿಗೆ ಇಂದು ಅರಿವಾಗ್ತಿದೆ.
ಪೊಲೀಸ್ ಸ್ಟೇಷನ್, ಮನೆ, ವಾಹನ ಎಲ್ಲವನ್ನೂ ಸುಟ್ಟರು.
ಕೆಜೆ ಹಳ್ಳಿ-ಡಿಜೆಹಳ್ಳಿ ಒಂದು ರೀತಿ ಸ್ಮಶಾನವಾಗಿತ್ತು, ಅದಕ್ಕೆ ಕಾಂಗ್ರೆಸ್ ಕುಮ್ಮಕ್ಕಿತ್ತು. ಆಗಿನ ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರೋದ್ರ ಜೊತೆ ಒಂದು ಸಮುದಾಯದ ಓಲೈಕೆಗೆ ಮುಂದಾಗಿದ್ದರು. ಇವತ್ತು ನ್ಯಾಯುತವಾದ ತನಿಖೆ ಮಾಡಿದರೆ ತಪ್ಪು ಮಾಡಿದ್ದು ಯಾರೆಂದು ಗೊತ್ತಾಗುತ್ತೆ ಎಂದು ಶೋಭಾ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು