12:24 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

01/10/2023, 12:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಆದ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ಕೆಜೆ ಹಳ್ಳಿ-ಡಿಜೆಹಳ್ಳಿ ಕೇಸಲ್ಲಿ ಅವರದ್ದೇ ಶಾಸಕರಿಗೆ ಕಾಂಗ್ರೆಸ್ ಬೆಂಬಲ ಕೊಡ್ಲಿಲ್ಲ. ಕಾಂಗ್ರೆಸ್ ಶಾಸಕರ ಮನೆ ಸುಟ್ರು ಯಾರೂ ಹೋಗಲಿಲ್ಲ, ನಾವೇ ಹೋಗಿದ್ದು. ಕಾಂಗ್ರೆಸ್ ತನ್ನ ಶಾಸಕರಿಗೆ ನೈತಿಕ ಬೆಂಬಲವನ್ನೂ ಕೊಡ್ಲಿಲ್ಲ ಎಂದರು.
ಅಲ್ಲಿ ತಪ್ಪು ಮಾಡಿದ್ದಾರೆ ಎಂದು ಕಾಂಗ್ರೆಸ್ಸಿಗೆ ಇಂದು ಅರಿವಾಗ್ತಿದೆ.
ಪೊಲೀಸ್ ಸ್ಟೇಷನ್, ಮನೆ, ವಾಹನ ಎಲ್ಲವನ್ನೂ ಸುಟ್ಟರು.
ಕೆಜೆ ಹಳ್ಳಿ-ಡಿಜೆಹಳ್ಳಿ ಒಂದು ರೀತಿ ಸ್ಮಶಾನವಾಗಿತ್ತು, ಅದಕ್ಕೆ ಕಾಂಗ್ರೆಸ್ ಕುಮ್ಮಕ್ಕಿತ್ತು. ಆಗಿನ ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರೋದ್ರ ಜೊತೆ ಒಂದು ಸಮುದಾಯದ ಓಲೈಕೆಗೆ ಮುಂದಾಗಿದ್ದರು. ಇವತ್ತು ನ್ಯಾಯುತವಾದ ತನಿಖೆ ಮಾಡಿದರೆ ತಪ್ಪು ಮಾಡಿದ್ದು ಯಾರೆಂದು ಗೊತ್ತಾಗುತ್ತೆ ಎಂದು ಶೋಭಾ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು