3:51 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಳಸ ಪದವಿಪೂರ್ವ ಕಾಲೇಜು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ; ಭದ್ರಾ ನದಿಯಲ್ಲಿ  ಓರ್ವನ ಮೃತದೇಹ ಪತ್ತೆ

25/12/2021, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕಳಸ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಗುರುವಾರ ಕಾಣೆಯಾಗಿದ್ದು ಇದರಲ್ಲಿ ಒಬ್ಬನ ಮೃತದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಓರ್ವನ ಮತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಮೃತದೇಹ ಪತ್ತೆಯಾದವನು ಹಿರೇಬೈಲಿನ ಜೀವನ್ ದಾಸ್(16), ಕಾಣೆಯಾದನು ಹೆಮ್ಮಕ್ಕಿ ಗ್ರಾಮದ ನಿಕ್ಷೇಪ ಎಂದು ಗುರುತಿಸಲಾಗಿದೆ.

ಕಳಸ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಇಬ್ಬರೂ ಸ್ನೇಹಿತರಾಗಿದ್ದರು.ಗುರುವಾರ ಕಾಲೇಜಿಗೆಂದು ಮನೆಯಿಂದ ಬಂದವರು ರಾತ್ರಿಯಾದರೂ ಮನೆಗೆ ಹಿಂದಿರುಗದ ಹಿನ್ನಲೆಯಲ್ಲಿ ಪೋಷಕರು ಸಾಕಷ್ಟು ಹುಡುಕಾಟ ನಡೆಸಿದ್ದರು.

ಶುಕ್ರವಾರ ಕಳಸದ ಭದ್ರಾನದಿಯ ರುದ್ರಪಾದ ಎಂಬ ಪ್ರದೇಶದಲ್ಲಿ ವಿದ್ಯಾರ್ಥಿಗಳ ಬ್ಯಾಗ್,ಯೂನಿಫಾರ್ಮ್,ಚಪ್ಪಲಿ,ಮೊಬೈಲ್ ಗಳು ಕಂಡು ಬಂದ ಹಿನ್ನಲೆಯಲ್ಲಿ ನದಿಯಲ್ಲಿ ಹುಡುಕಾಟ ನಡೆಸಿದಾಗ ಜೀವನ್ ಎಂಬುವವನ ಮೃತದೇಹ ಪತ್ತೆಯಾಗಿದೆ. ಇನ್ನೊರ್ವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು