2:35 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೆಎಂಬಿಯು ರಾಜ್ಯದ ಜಲಮಾರ್ಗ ಅಭಿವೃದ್ಧಿಪಡಿಸುವ ಗುರಿ ಹೊಂದಿದೆ: ಸಿಇಒ ಜಯರಾಮ್ ರಾಯಪುರ್

01/06/2024, 17:16

ಬೆಂಗಳೂರು(reporterkarnataka.com):ಪ್ರಸ್ತುತ ಕರ್ನಾಟಕ ಜಲಸಾರಿಗೆ ಮಂಡಳಿಯು ಕರ್ನಾಟಕ ಜಲಸಾರಿಗೆಗೆ ಮೂಲಸೌಕರ್ಯ ಒದಗಿಸುವ, ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ರಾಜ್ಯದ ಜಲಮಾರ್ಗಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್ ರಾಯಪುರ್ ಅವರು ಹೇಳಿದರು.
ನಗರದ ರೆಸಿಡೆನ್ಸಿ ರೋಡ್‌ ನಲ್ಲಿರುವ ವಿವಾಂತ್‌ ಹೋಟೆಲ್‌ ನ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ “ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿ” ಯ ಸಂವಾದದಲ್ಲಿ ಅವರು ಮಾತನಾಡಿದರು.
ಕರ್ನಾಟಕ ಜಲಸಾರಿಗೆ ಮಂಡಳಿ (ಕೆಎಂಬಿ) ತನ್ನ ಪ್ರಸ್ತುತ ಮತ್ತು ಮುಂಬರುವ ಪ್ರವಾಸೋದ್ಯಮ ಮತ್ತು ಜಲಮಾರ್ಗ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಯೋಜನೆಗಳಿಂದ ಗುರುತಿಸಲಾದ ವಿವಿಧ ಸ್ಥಳಗಳಲ್ಲಿ ಒಳನಾಡಿನ ಜಲಮಾರ್ಗ ಪ್ರವಾಸೋದ್ಯಮ, ಕರ್ನಾಟಕದಲ್ಲಿ ದ್ವೀಪ ಮಾಸ್ಟರ್ ಪ್ಲ್ಯಾನ್ ಅಭಿವೃದ್ಧಿ, ಶರಾವತಿ ನದಿ ಪ್ರವಾಸೋದ್ಯಮ, ವಾಟರ್ ಏರೋಡ್ರೋಮ್ ಗಳ ಕಾರ್ಯಾಚರಣೆ ಸೇರಿದಂತೆ ಹಲವು ಮಹತ್ವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಸಂವಾದ ಸಭೆಯ ಅಧ್ಯಕ್ಷತೆ ವಹಿಸಿದ ಐಡಬ್ಲ್ಯೂಎಐ ಅಧ್ಯಕ್ಷರಾದ ವಿಜಯ್ ಕುಮಾರ್ ಅವರು ಮಾತನಾಡಿ, ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ಮತ್ತು ಅದರ ಮಧ್ಯಸ್ಥಗಾರರಿಗೆ ಐಡಬ್ಲ್ಯೂಎಐ ಹೇಗೆ ಸಹಾಯ ಮತ್ತು ಬೆಂಬಲವನ್ನು ಒದಗಿಸಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಪ್ರಸ್ತುತ ಐಡಬ್ಲ್ಯೂಎಐನ ವಿವಿಧ ಯೋಜನೆಗಳು ಮತ್ತು ಅದರ ಕಾರ್ಯಗಳ ಬಗ್ಗೆ ತಿಳಿಸಿ, ಅವುಗಳ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಸಹ ತಿಳಿಸಿದರು.
ಕರ್ನಾಟಕದಲ್ಲಿ ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿಯನ್ನು ಸಮರ್ಥವಾಗಿ ಮತ್ತು ಅಂತರ್ಗತವಾಗಿ ಕೈಗೊಳ್ಳುವುದರ ಬಗ್ಗೆ ಖಾತ್ರಿಪಡಿಸಿದರು.

ಇದರಿಂದ ರಾಷ್ಟ್ರ ಮತ್ತು ರಾಜ್ಯಗಳ ಬಂದರುಗಳ ಅಭಿವೃದ್ಧಿಯಿಂದ ದೇಶದ ಆರ್ಥಿಕ ಬೆಳವಣಿಗೆ ಹೆಚ್ಚಿಸುತ್ತದೆ ಎಂದರು.
ಇನ್ನು ಸಂವಾದ ಕಾರ್ಯಕ್ರಮದಲ್ಲಿ ಎಲ್ಲಾ ಪಾಲುದಾರರು ಮುಕ್ತವಾಗಿ ಚರ್ಚೆ ನಡೆಸಿದರು.ಈ ಕಾರ್ಯಕ್ರಮದಲ್ಲಿ ಬಂದರುಗಳ ನಿರ್ದೇಶಕ ಮತ್ತು ಕರ್ನಾಟಕ ಜಲಸಾರಿಗೆ ಮಂಡಳಿಯ ಸದಸ್ಯ ಕ್ಯಾಪ್ಟನ್ ಸ್ವಾಮಿ ಸಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಚೀಫ್ ಇಂಜಿನಿಯರ್ ಪ್ರವೀತ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಟಿ.ಎಸ್ ಥಾರನಾಥ ರಾಥೋಡ್, ಮೀನುಗಾರಿಕೆ ಇಲಾಖೆ, ಇಂಧನ ಇಲಾಖೆ, ಜಂಗಲ್ ಲಾಡ್ಜ್ ಗಳ ಪ್ರತಿನಿಧಿಗಳು ಮತ್ತು ಪ್ರವಾಸೋದ್ಯಮ ಅಧಿಕಾರಿಗಳು ಸೇರಿದಂತೆ ಕರ್ನಾಟಕ ಜಲಸಾರಿಗೆ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು