1:07 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕೆಎಂಎಫ್  ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯಲ್ಲಿ ಮುದ್ರಿಸಿ: ಶಾಸಕ ವೇದವ್ಯಾಸ ಕಾಮತ್ ಪತ್ರ

23/07/2021, 17:57

ಮಂಗಳೂರು(reporterkarnataka news):

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಂಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. 

ಈ ವಿಚಾರವಾಗಿ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳು

ಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಲುಲಿಪಿ ಕಂಡು ಬಂದಿದೆ. ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು