10:15 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಒಂದೇ ದಿನ 4 ಪ್ರತ್ಯೇಕ ಅಪಘಾತ: ಬ್ರೇಕ್ ವೈಫಲ್ಯದಿಂದ ಮನೆಯಂಗಳಕ್ಕೆ ಉರುಳಿ ಬಿದ್ದ ಕಾರು

20/07/2025, 11:32

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನಲ್ಲಿ ಒಂದೇ ದಿನ ನಾಲ್ಕು ಪ್ರತ್ಯೇಕ ಅಪಘಾತಗಳು ಸಂಭವಿಸಿದೆ. ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ಶಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ಮನೆಯ ಅಂಗಳಕ್ಕೆ ಉರುಳಿ ಬಿದ್ದಿದೆ.


ಬೆಂಗಳೂರಿನಿಂದ ಇರ್ಪು ಜಲಪಾತ ವೀಕ್ಷಿಸಿ ಕೇರಳದ ವೈನಾಡುಗೆ ತೆರಳುತ್ತಿದ್ದ ಈ ಕಾರು ಸೇವೆಂತ್ ಮೈಲ್ ಎನ್ನುವಲ್ಲಿ ಯತೀಶ್ ಎಂಬುವವರ ಮನೆಯ ಅಂಗಳಕ್ಕೆ ಉರುಳಿಬಿದ್ದಿದ್ದು, ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. *ಬ್ರೇಕ್ ವೈಫಲ್ಯ ದಿಂದ ಅವಘಡ:* ಸೋಮವಾರಪೇಟೆ ತಾಲ್ಲೂಕಿನ ಕೊಗೆ ಕೋಡಿ ಎನ್ನುವಲ್ಲಿ ಬೆಂಗಳೂರಿನಿಂದ ಸೋಮವಾರಪೇಟೆಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ಬ್ರೇಕ್ ವಿಫಲಗೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇನ್ನು ತಾಳತ ಮನೆ ಬಳಿ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಸಹ ಸಾರಿಗೆ ಬಸ್ಸು ಬ್ರೇಕ್ ವಿಫಲಗೊಂಡು ಬರೆಗೆ ಗುದ್ದಿದ್ದು ಚಾಲಕನ ಸಮಯ ಪ್ರಜ್ಞೆ ಯಿಂದ ಪ್ರಪಾತಕ್ಕೆ ಬೀಳಬೇಕಿದ್ದ ಬಸ್ಸನ್ನು ತಡೆದಿದ್ದಾರೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಯಲ್ಲಿನ ಸಿಂಕೋನ ಸಮೀಪದ ತಿರುವಿನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಮಗುಚಿಕೊಂಡಿದ್ದು, ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು