11:29 AM Wednesday3 - September 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ…

ಇತ್ತೀಚಿನ ಸುದ್ದಿ

Kodagu | ಕಾಫಿ ವರ್ಕ್ಸ್ ನಲ್ಲಿ 7 ಸಾವಿರ ಕೆಜಿ ಕಾಫಿ ಕಳ್ಳತನ: 5 ಮಂದಿ ಆರೋಪಿಗಳ ಬಂಧನ

03/09/2025, 11:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲ್ಲೂಕಿನ ಕೂಡ್ಲುರು ಕೈಗಾರಿಕಾ ಪ್ರದೇಶದಲ್ಲಿರುವ ಉಮಾ ಕಾಫಿ ವರ್ಕ್ಸ್ ನಲ್ಲಿ ಅಂದಾಜು ಏಳು ಸಾವಿರ ಕೆಜಿ ಕಾಫಿ ಕಳ್ಳತನ ಮಾಡಿದ್ದ ಐವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಈ ಕಾಫಿ ವರ್ಕ್ಸ್ ನಲ್ಲಿ ಅಂದಾಜು ಏಳು ಸಾವಿರ ಕೆಜಿ ಕಾಫಿ ಕಳ್ಳತನವಾಗಿದ್ದ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 306, 3(5) BNS Act ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಡಿಎಸ್ ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಬೈಲುಕುಪ್ಪೆ ಗ್ರಾಮದ ಸುನೀಲ್ ಆರ್ (34), ರಾಜು ಆರ್ (24), ಶರತ್ (24), ಬಿಹಾರ ರಾಜ್ಯ ಪಶ್ಚಿಮ ಚಂಪಾರಣ್ ಜಿಲ್ಲೆ ಮೂಲದ ದಿನೇಶ್ ರಾವತ್ (44) ಮತ್ತು ಬಿಹಾರ ರಾಜ್ಯ ಪೂರ್ವ ಚಂಪಾರಣ್ ಜಿಲ್ಲೆ ಮೂಲದ ಜಿತೇಂದ್ರ ಕುಮಾರ್ ರಾಮ್ (38) ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಬಂಧಿತ ಆರೋಪಿಗಳಿಂದ 6495 ಕೆಜಿ ಕಾಫಿ, ಒಂದು ಕಾರು, ಎರಡು ದ್ವಿ ಚಕ್ರ ವಾಹನ ಮತ್ತು ಒಂದು ಆಟೋ ರಿಕ್ಷಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು