3:20 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

Kodagu | ಕಾಫಿ ವರ್ಕ್ಸ್ ನಲ್ಲಿ 7 ಸಾವಿರ ಕೆಜಿ ಕಾಫಿ ಕಳ್ಳತನ: 5 ಮಂದಿ ಆರೋಪಿಗಳ ಬಂಧನ

03/09/2025, 11:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲ್ಲೂಕಿನ ಕೂಡ್ಲುರು ಕೈಗಾರಿಕಾ ಪ್ರದೇಶದಲ್ಲಿರುವ ಉಮಾ ಕಾಫಿ ವರ್ಕ್ಸ್ ನಲ್ಲಿ ಅಂದಾಜು ಏಳು ಸಾವಿರ ಕೆಜಿ ಕಾಫಿ ಕಳ್ಳತನ ಮಾಡಿದ್ದ ಐವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಈ ಕಾಫಿ ವರ್ಕ್ಸ್ ನಲ್ಲಿ ಅಂದಾಜು ಏಳು ಸಾವಿರ ಕೆಜಿ ಕಾಫಿ ಕಳ್ಳತನವಾಗಿದ್ದ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 306, 3(5) BNS Act ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಡಿಎಸ್ ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಬೈಲುಕುಪ್ಪೆ ಗ್ರಾಮದ ಸುನೀಲ್ ಆರ್ (34), ರಾಜು ಆರ್ (24), ಶರತ್ (24), ಬಿಹಾರ ರಾಜ್ಯ ಪಶ್ಚಿಮ ಚಂಪಾರಣ್ ಜಿಲ್ಲೆ ಮೂಲದ ದಿನೇಶ್ ರಾವತ್ (44) ಮತ್ತು ಬಿಹಾರ ರಾಜ್ಯ ಪೂರ್ವ ಚಂಪಾರಣ್ ಜಿಲ್ಲೆ ಮೂಲದ ಜಿತೇಂದ್ರ ಕುಮಾರ್ ರಾಮ್ (38) ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಬಂಧಿತ ಆರೋಪಿಗಳಿಂದ 6495 ಕೆಜಿ ಕಾಫಿ, ಒಂದು ಕಾರು, ಎರಡು ದ್ವಿ ಚಕ್ರ ವಾಹನ ಮತ್ತು ಒಂದು ಆಟೋ ರಿಕ್ಷಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು