6:40 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

Kodagu | ಶ್ರೀ ಗಣೇಶ ಸೇವಾ ಸಮಿತಿಯಿಂದ ವೈಭವದ ಗಣೇಶೋತ್ಸವ: ಮೇಕೇರಿಯಲ್ಲಿ ಗಮನಸೆಳೆದ ಭಜನೆ ಕುಣಿತ

31/08/2025, 15:38

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಭಜನಾ ತಂಡದಿಂದ ನೃತ್ಯ ಭಜನೆ ಗಮನ ಸೆಳೆಯಿತು.
ಆಗಸ್ಟ್ 27ರಂದು ಗಣೇಶನ ಉತ್ಸವ ಮೂರ್ತಿಯನ್ನು ಪ್ರತಿಷ್ಥಾಪಿಸುವ ಮೂಲಕ ಗಣೇಶೋತ್ಸವಕ್ಕೆ ಚಾಲನೆ ನೀಡಿ 29ರಂದು ಸಂಜೆ ಸುಭಾಷ್‌ನಗರದ ಹೊಳೆಯಲ್ಲಿ ಗಣೇಶನ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಈ ನಡುವೆ ದೇವಾಲಯದ ಆವರಣದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗ್ರಾಮದ ನಿವಾಸಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ನಡೆಯಿತು.
ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ವಾಗ್ಮಿ ಶ್ರೀಶಾ ಅವರು ಗಣೇಶೋತ್ವವದ ಆಚರಣೆ, ಮಹತ್ವ, ನಡೆದು ಬಂದ ಹಾದಿಯ ಕುರಿತು ಧಾರ್ಮಿಕ ಪ್ರವಚನ ನೀಡಿದರು.
28ರಂದು ಸಂಜೆ ಖ್ಯಾತ ಗಾಯನ ತಂಡದಿಂದ ಸಂಗೀತ ಸತ್ಸಂಗ, ಧಾರ್ಮಿಕ ಪ್ರವಚನ ನಡೆಯಿತು. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ಗೌರಿ ಗಣೇಶನ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಮೇಕೇರಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಹೊರಟು ಸುಭಾಷ್ ನಗರದ ಹೊಳೆಯಲ್ಲಿ ವಿಸರ್ಜಿಸಲಾಯಿತು. ಶ್ರೀ ಗಣೇಶ ಸೇವಾ ಸಮಿತಿಯಿಂದ ಪ್ರತೀದಿ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆಯಿತು.
ಗಮನ ಸೆಳೆದ ಭಜನೆ ಕುಣಿತ ಈ ಬಾರಿ ಮೇಕೇರಿ ಗ್ರಾಮದಲ್ಲಿ ನೃತ್ಯ ಭಜನೆಯ ಸದ್ದು ಭಕ್ತಾದಿಗಳನ್ನು ಪುಳಕಿತಗೊಳಿಸಿತು. ಶ್ರೀ ಗಣೇಶ ಸೇವಾ ಸಮಿತಿಯ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಆನಡ್ಕದ ಶ್ರೀರಾಮ ಭಜನಾ ತಂಡದಿಂದ ನಡೆದ ನೃತ್ಯ ಭಜನೆಯು ಭಕ್ತಾದಿಗಳ ಮನಸೂರೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು