3:55 AM Saturday18 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಕೊಡಗು: ಜೂ.25 ರವರೆಗೆ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ಅವಕಾಶ

16/06/2026, 20:51

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದಲ್ಲಿ ನೆಲದಲ್ಲಿ ತೇವಾಂಶ ಅಧಿಕವಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31 ಮತ್ತು ಇತರೆ ಸಂಬಂಧಿತ ಕಾಯ್ದೆಗಳಡಿ ದತ್ತವಾದ ಅಧಿಕಾರದಂತೆ ಕೊಡಗು ಜಿಲ್ಲೆಯಾದ್ಯಂತ ಜೂನ್, 10ರಿಂದ ಜುಲೈ 9 ರವರೆಗೆ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು.
ಆದರೆ, ಪ್ರಸ್ತುತ ಕೋರಿಕೆಯಂತೆ ಹಾಗೂ ಹಾಲಿ ಜಿಲ್ಲೆಯಲ್ಲಿನ ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ, ಭಾಗಶಃ ಮಾರ್ಪಡಿಸಿ ಎಲ್ಲಾ ವಿಧದ ವಾಹನಗಳ ಸಂಚಾರಕ್ಕೆ ಜೂನ್, 25 ರವರೆಗೆ ಅವಕಾಶ ನೀಡಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು