10:17 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

Kodagu | ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಅಕ್ರಮ ಮಾರಾಟ; ಓರ್ವನ ಬಂಧನ, 7 ಕ್ವಿಂಟಾಲ್ ಅಧಿಕ ಅಕ್ಕಿ ವಶ

05/08/2025, 10:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೈಟಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 7 ಕ್ವಿಂಟಲ್ 79 ಕೆಜಿ ಅಕ್ಕಿ, ಒಂದು ವಾಹನ ಹಾಗೂ ಚಾಲಕನನ್ನು ಪೊನ್ನoಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಗೋಣಿಕೊಪ್ಪದ ಮುಸ್ತಫಾ ಮತ್ತು ಅರ್ವತೋಕ್ಲು ಗ್ರಾಮದ ಮನೋಜ್ ಎಂಬುವವರಿಂದ ಅಕ್ಕಿ ಸಂಗ್ರಹಿಸಿ ವಿಠಲ ಎಂಬಾತ ಮೈಸೂರು ಜಿಲ್ಲೆ ಯ ಹುಣಸೂರಿನ ಕಲ್ಕುಣಿಕೆ ಎಂಬಲ್ಲಿಗೆ ಸಾಗಿಸುತ್ತಿರುವಾಗ ಸಾರ್ವಜನಿಕರ ಸಹಕಾರದಿಂದ ಗೋಣಿಕೊಪ್ಪ -ಮೈಸೂರು ರಸ್ತೆಯ ಚೆನ್ನoಗೋಲಿ ಯಲ್ಲಿ ವಾಹನ ಅಡ್ಡಗಟ್ಟಿ ಹಿಡಿದಿದ್ದಾರೆ. ವಿಠಲ ಗೋಣಿಕೊಪ್ಪದಲ್ಲಿ ಗುಜುರಿ ಅಂಗಡಿ ನಡೆಸಿಕೊಂಡಿದ್ದು, ಅಂಗಡಿಗೆ ಬರುವ ಕಾರ್ಮಿಕರನ್ನು ಗುರಿಯಾಗಿರಿಸಿ ಈ ದಂಧೆ ನಡೆಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು