6:50 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ ಮೊಬೈಲ್ ಫೋನ್ ಕಳ್ಳತನ: ಬಂಧನ

29/08/2025, 14:21

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಮುಖ್ಯರಸ್ತೆಯಲ್ಲಿರುವ ಫಲೀಲ್ ಎಂಬುವವರಿಗೆ ಸೇರಿದ Harmony Phones ಅಂಗಡಿಯ ರೋಲಿಂಗ್ ಶೆಟರ್ಸ್ ಮುರಿದು ವಿವಿಧ ಕಂಪೆನಿಗಳ ಹೊಸ 32 ಮೊಬೈಲ್ ಫೋನ್ ಗಳು ಮತ್ತು ರೂ. 3 ಸಾವಿರ ನಗದು ಹಣ ಕಳವು ಮಾಡಿರುವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತೇಗೂರು ಗ್ರಾಮದ ನಿವಾಸಿ, ಅಸ್ಸಾಂ ಮೂಲದ ಜೋಹುರ್ ಆಲಿ (28) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನಿಂದ 32 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಳ್ಳತನದ ಪ್ರಕರಣದ ಬಗ್ಗೆ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಕಲಂ 331(4), 305(ಎ), BNS Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗಾಗಿ ವಿರಾಜಪೇಟೆ DSP ಮಹೇಶ್ ಕುಮಾರ್, ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್, ಪಿಎಸ್ಐ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿ ಮಾಹಿತಿ ಸಂಗ್ರಹಿಸಿ ಜೋಹುರ್ ಆಲಿ (28) ಎಂಬಾತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು