1:28 AM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ

24/07/2025, 15:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ “ಪೊಲಿಂಕಾನ ಉತ್ಸವ” ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು.

ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆ ದಿಂಡುನಿಂದ ಸಿದ್ದಗೊಂಡ ಸುಮಂಗಲಿ ಮಂಟಪಕ್ಕೆ ದೇವಾಲಯದ ಪ್ರದಕ್ಷಿಣೆ ಬಂದ ನಂತರ ದೀಪ ಬೆಳಗಿ, ಮುತೈದೆ ಆಭರಣ ಗಳಾದ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿ ತಟ್ಟೆ ಸೇರಿದಂತೆ ಹೂವು ಹಣ್ಣುಗಳಿಂದ ಅಲಂಕರಿಸಿ ಮತ್ತೆ ಪ್ರದಕ್ಷಿಣೆ ಬಂದು ಮುಖ್ಯ ದ್ವಾರದ ಮೂಲಕ ನೂರಾರು ಭಕ್ತರ ಸಮ್ಮುಖದಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕಾವೇರಿ ಶಾಂತಳಾಗಿ, ಮಳೆಗಾಲದಲ್ಲಿ ಯಾವುದೇ ಹಾನಿ ಮಾಡದೇ ರೈತರಿಗೆ ಸುಬಿಕ್ಷ ವಾಗಲಿ ಎಂದು ಪೂಜೆ ಸಲ್ಲಿಸಿ ಮಂಟಪವನ್ನು ನದಿಯಲ್ಲಿ ತೇಲಿ ಬಿಡಲಾಯಿತು. ಈ ವೇಳೆ ತಲಕಾವೇರಿ – ಭಾಗಮಂಡಲ ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು, ಪ್ರಧಾನ ಅರ್ಚಕರು, ಸ್ಥಳೀಯ ಭಕ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು