12:42 AM Thursday29 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ

24/07/2025, 15:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ “ಪೊಲಿಂಕಾನ ಉತ್ಸವ” ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು.

ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆ ದಿಂಡುನಿಂದ ಸಿದ್ದಗೊಂಡ ಸುಮಂಗಲಿ ಮಂಟಪಕ್ಕೆ ದೇವಾಲಯದ ಪ್ರದಕ್ಷಿಣೆ ಬಂದ ನಂತರ ದೀಪ ಬೆಳಗಿ, ಮುತೈದೆ ಆಭರಣ ಗಳಾದ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿ ತಟ್ಟೆ ಸೇರಿದಂತೆ ಹೂವು ಹಣ್ಣುಗಳಿಂದ ಅಲಂಕರಿಸಿ ಮತ್ತೆ ಪ್ರದಕ್ಷಿಣೆ ಬಂದು ಮುಖ್ಯ ದ್ವಾರದ ಮೂಲಕ ನೂರಾರು ಭಕ್ತರ ಸಮ್ಮುಖದಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕಾವೇರಿ ಶಾಂತಳಾಗಿ, ಮಳೆಗಾಲದಲ್ಲಿ ಯಾವುದೇ ಹಾನಿ ಮಾಡದೇ ರೈತರಿಗೆ ಸುಬಿಕ್ಷ ವಾಗಲಿ ಎಂದು ಪೂಜೆ ಸಲ್ಲಿಸಿ ಮಂಟಪವನ್ನು ನದಿಯಲ್ಲಿ ತೇಲಿ ಬಿಡಲಾಯಿತು. ಈ ವೇಳೆ ತಲಕಾವೇರಿ – ಭಾಗಮಂಡಲ ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು, ಪ್ರಧಾನ ಅರ್ಚಕರು, ಸ್ಥಳೀಯ ಭಕ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು