12:02 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ

24/07/2025, 15:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ “ಪೊಲಿಂಕಾನ ಉತ್ಸವ” ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು.

ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆ ದಿಂಡುನಿಂದ ಸಿದ್ದಗೊಂಡ ಸುಮಂಗಲಿ ಮಂಟಪಕ್ಕೆ ದೇವಾಲಯದ ಪ್ರದಕ್ಷಿಣೆ ಬಂದ ನಂತರ ದೀಪ ಬೆಳಗಿ, ಮುತೈದೆ ಆಭರಣ ಗಳಾದ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿ ತಟ್ಟೆ ಸೇರಿದಂತೆ ಹೂವು ಹಣ್ಣುಗಳಿಂದ ಅಲಂಕರಿಸಿ ಮತ್ತೆ ಪ್ರದಕ್ಷಿಣೆ ಬಂದು ಮುಖ್ಯ ದ್ವಾರದ ಮೂಲಕ ನೂರಾರು ಭಕ್ತರ ಸಮ್ಮುಖದಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕಾವೇರಿ ಶಾಂತಳಾಗಿ, ಮಳೆಗಾಲದಲ್ಲಿ ಯಾವುದೇ ಹಾನಿ ಮಾಡದೇ ರೈತರಿಗೆ ಸುಬಿಕ್ಷ ವಾಗಲಿ ಎಂದು ಪೂಜೆ ಸಲ್ಲಿಸಿ ಮಂಟಪವನ್ನು ನದಿಯಲ್ಲಿ ತೇಲಿ ಬಿಡಲಾಯಿತು. ಈ ವೇಳೆ ತಲಕಾವೇರಿ – ಭಾಗಮಂಡಲ ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು, ಪ್ರಧಾನ ಅರ್ಚಕರು, ಸ್ಥಳೀಯ ಭಕ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು