11:01 PM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ

24/07/2025, 15:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ “ಪೊಲಿಂಕಾನ ಉತ್ಸವ” ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು.

ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆ ದಿಂಡುನಿಂದ ಸಿದ್ದಗೊಂಡ ಸುಮಂಗಲಿ ಮಂಟಪಕ್ಕೆ ದೇವಾಲಯದ ಪ್ರದಕ್ಷಿಣೆ ಬಂದ ನಂತರ ದೀಪ ಬೆಳಗಿ, ಮುತೈದೆ ಆಭರಣ ಗಳಾದ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿ ತಟ್ಟೆ ಸೇರಿದಂತೆ ಹೂವು ಹಣ್ಣುಗಳಿಂದ ಅಲಂಕರಿಸಿ ಮತ್ತೆ ಪ್ರದಕ್ಷಿಣೆ ಬಂದು ಮುಖ್ಯ ದ್ವಾರದ ಮೂಲಕ ನೂರಾರು ಭಕ್ತರ ಸಮ್ಮುಖದಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕಾವೇರಿ ಶಾಂತಳಾಗಿ, ಮಳೆಗಾಲದಲ್ಲಿ ಯಾವುದೇ ಹಾನಿ ಮಾಡದೇ ರೈತರಿಗೆ ಸುಬಿಕ್ಷ ವಾಗಲಿ ಎಂದು ಪೂಜೆ ಸಲ್ಲಿಸಿ ಮಂಟಪವನ್ನು ನದಿಯಲ್ಲಿ ತೇಲಿ ಬಿಡಲಾಯಿತು. ಈ ವೇಳೆ ತಲಕಾವೇರಿ – ಭಾಗಮಂಡಲ ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು, ಪ್ರಧಾನ ಅರ್ಚಕರು, ಸ್ಥಳೀಯ ಭಕ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು