ಇತ್ತೀಚಿನ ಸುದ್ದಿ
Kodagu | ವಿರಾಜಪೇಟೆಯ ಪೆರಂಬಾಡಿ ಬಳಿ ಕಾರು-ಟಿಪ್ಪರ್ ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ
18/06/2026, 15:14
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnata@gmail.com
ಕೊಡಗು- ಕೇರಳ ಗಡಿ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಚೆಕ್ ಪೋಸ್ಟ್ ನಿಂದ ಮೂರು ಕಿ.ಮೀ ದೊರದಲ್ಲಿ ಟಿಪ್ಪರ್ ಹಾಗು ಶಿಫ್ಟ್ ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಡೈರಿ ಸರ್ಕಲ್ ನಿವಾಸಿ ಷಣ್ಮುಖ (28) ಎಂದು ಗುರುತಿಸಲಾಗಿದೆ. ಶಿಫ್ಟ್ ಕಾರ್ ನಲ್ಲಿ ವಿರಾಜಪೇಟೆ ಮಾರ್ಗವಾಗಿ ಶಬರಿಮಲೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.


ಕಾರು ಸಂಪೂರ್ಣ ನಜ್ಜು ಗುಜ್ಜು ಆಗಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













