10:41 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ ಯಾತ್ರೆ

03/10/2025, 14:28

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಜನೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ಜಿ.ಟಿ. ವೃತ್ತ, ನಗರಸಭೆ ಮುಂಭಾಗ ಹಾಗೂ ಗಾಂಧಿ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಂಡುಬಂದಿದ್ದಾರೆ.


ಕೆಲವು ಮಂಟಪಗಳ ಡಿಜೆ ಸಂಗೀತಕ್ಕೆ ಮಾರುಹೋಗಿ ಕುಣಿದು ಕುಪ್ಪಳಿಸಿದ್ದಾರೆ. ಗಾಂಧಿ ಮೈದಾನದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು. ಆಸನಗಳೆಲ್ಲವೂ ಭರ್ತಿಯಾಗಿ ಪ್ರೇಕ್ಷಕರು ಗುಂಪು ಗುಂಪಾಗಿ ನಿಂತುಕೊಂಡೆ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದಾರೆ. ದಶಮಂಟಪಗಳ ಕಡೆಯಿಂದ ಶೋಭಾ ಯಾತ್ರೆ ಆರಂಭಗೊಂಡಿದ್ದು ಪೇಟೆ ರಾಮ ಮಂದಿರ ಮಂಟಪ ಈಗಾಗಲೇ ಚೌಟಿ ಮಾರಿಯಮ್ಮ ದೇಗುಲದ ಮುಂಭಾಗಕ್ಕೆ ಆಗಮಿಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಇಡೀ ನಗರ ಸಿಸಿಟಿವಿಯ ಕಣ್ಗಾವಲಿನಲ್ಲಿದೆ. ಈ ಬಾರಿ ನಗರದಲ್ಲಿ ವಿದ್ಯುತ್ ದೀಪ ಅಲಂಕಾರ ಹೆಚ್ಚಿನ ಶೋಭೆಯನ್ನು ನೀಡಿದೆ. ದಸರಾ ಜನೋತ್ಸವದ ಯಶಸ್ವಿಗಾಗಿ ಸಮಿತಿಯ ಎಲ್ಲ ಪದಾಧಿಕಾರಿಗಳು ಪಾಲ್ಗೊಂಡಿದ್ದು ವರುಣನ ಸಿಂಚನವಿಲ್ಲದೆ, ಮಂಜಿನ ನಗರಿ ಮಡಿಕೇರಿಯಲ್ಲಿ ತಂಪಾದ ಹವೆಯಲ್ಲಿ ಪ್ರೇಕ್ಷಕರು ದಶಮಂಟಪಗಳ ಚಲನವಲನದ ಕಥಾಪ್ರಸಂಗವನ್ನು ವೀಕ್ಷಿಸಿದರು. ಒಟ್ಟಿನಲ್ಲಿ ಮಡಿಕೇರಿ ದಸರಾ ಈ ಬಾರಿಯೂ ಕೂಡ ತನ್ನ ವೈಭವವನ್ನು ಸಾರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು