10:14 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ ಯಾತ್ರೆ

03/10/2025, 14:28

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಜನೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ಜಿ.ಟಿ. ವೃತ್ತ, ನಗರಸಭೆ ಮುಂಭಾಗ ಹಾಗೂ ಗಾಂಧಿ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಂಡುಬಂದಿದ್ದಾರೆ.


ಕೆಲವು ಮಂಟಪಗಳ ಡಿಜೆ ಸಂಗೀತಕ್ಕೆ ಮಾರುಹೋಗಿ ಕುಣಿದು ಕುಪ್ಪಳಿಸಿದ್ದಾರೆ. ಗಾಂಧಿ ಮೈದಾನದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು. ಆಸನಗಳೆಲ್ಲವೂ ಭರ್ತಿಯಾಗಿ ಪ್ರೇಕ್ಷಕರು ಗುಂಪು ಗುಂಪಾಗಿ ನಿಂತುಕೊಂಡೆ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದಾರೆ. ದಶಮಂಟಪಗಳ ಕಡೆಯಿಂದ ಶೋಭಾ ಯಾತ್ರೆ ಆರಂಭಗೊಂಡಿದ್ದು ಪೇಟೆ ರಾಮ ಮಂದಿರ ಮಂಟಪ ಈಗಾಗಲೇ ಚೌಟಿ ಮಾರಿಯಮ್ಮ ದೇಗುಲದ ಮುಂಭಾಗಕ್ಕೆ ಆಗಮಿಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಇಡೀ ನಗರ ಸಿಸಿಟಿವಿಯ ಕಣ್ಗಾವಲಿನಲ್ಲಿದೆ. ಈ ಬಾರಿ ನಗರದಲ್ಲಿ ವಿದ್ಯುತ್ ದೀಪ ಅಲಂಕಾರ ಹೆಚ್ಚಿನ ಶೋಭೆಯನ್ನು ನೀಡಿದೆ. ದಸರಾ ಜನೋತ್ಸವದ ಯಶಸ್ವಿಗಾಗಿ ಸಮಿತಿಯ ಎಲ್ಲ ಪದಾಧಿಕಾರಿಗಳು ಪಾಲ್ಗೊಂಡಿದ್ದು ವರುಣನ ಸಿಂಚನವಿಲ್ಲದೆ, ಮಂಜಿನ ನಗರಿ ಮಡಿಕೇರಿಯಲ್ಲಿ ತಂಪಾದ ಹವೆಯಲ್ಲಿ ಪ್ರೇಕ್ಷಕರು ದಶಮಂಟಪಗಳ ಚಲನವಲನದ ಕಥಾಪ್ರಸಂಗವನ್ನು ವೀಕ್ಷಿಸಿದರು. ಒಟ್ಟಿನಲ್ಲಿ ಮಡಿಕೇರಿ ದಸರಾ ಈ ಬಾರಿಯೂ ಕೂಡ ತನ್ನ ವೈಭವವನ್ನು ಸಾರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು