ಇತ್ತೀಚಿನ ಸುದ್ದಿ
Kodagu | ಹಾರಂಗಿ ಹಿನ್ನೀರು ದುರಂತ: ಮತ್ತೋರ್ವ ವಿದ್ಯಾರ್ಥಿಯ ಮೃತದೇಹ ಪತ್ತೆ
13/11/2025, 20:09
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಮಧ್ಯಾಹ್ನ
ಮುಳುಗಿ ಮೃತಪಟ್ಟ ಮಡಿಕೇರಿ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ಮಡಿಕೇರಿ ರಾಜಸೀಟ್ ನಿವಾಸಿ ತಿಮ್ಮಯ್ಯರವರ ಪುತ್ರ ತರುಣ್ ತಮ್ಮಯ್ಯ (17) ರವರ ಮೃತದೇಹ ಇಂದು ಪತ್ತೆಯಾಗಿದೆ.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು, ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ದುಬಾರೆ Rafting ತಂಡದವರು ಈ ವಿದ್ಯಾರ್ಥಿಯ ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಮೇಲಕ್ಕೆ ತರುವ ಕಾರ್ಯಾಚರಣೆಯಲ್ಲಿ ತೊಡಗಿದ್ದರು.












