9:33 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ

ಇತ್ತೀಚಿನ ಸುದ್ದಿ

Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ

23/09/2025, 09:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಮಹದೇವಪೇಟೆಯ ಪಂಪಿನ ಕೆರೆಯಲ್ಲಿ ಸೋಮವಾರ ಸಂಜೆ ನಗರದ ಶಕ್ತಿ ದೇವತೆಗಳ ಕರಗಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾಗೆ ಚಾಲನೆ ದೊರೆಯಿತು.

ನಾಲ್ಕು ಶಕ್ತಿ ದೇವತೆಗಳ ಕರಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ವಿಶೇಷ ಪೂಜೆ ಸಲ್ಲಿಸಿ ಮಡಿಕೇರಿ ದಸರಾ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು ನಗರದ ಶಕ್ತಿ ದೇವತೆಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಕರಗ ಉತ್ಸವದೊಂದಿಗೆ ಮಡಿಕೇರಿ ದಸರಾಗೆ ಚಾಲನೆ ನೀಡಲಾಗಿದೆ ಎಂದರು.
ಭಕ್ತಿಭಾವದಿಂದ ಕರಗ ಉತ್ಸವದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ಸಚಿವರು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಸರ್ಕಾರ ಮಡಿಕೇರಿ ದಸರಾ ಉತ್ಸವಕ್ಕೆ 1.50 ಕೋಟಿ ರೂ ಬಿಡುಗಡೆಗೆ ಆದೇಶ ಮಾಡಿದ್ದು, ಈ ಬಾರಿ ಸಂಗೀತಾ ಕಾರ್ಯಕ್ರಮಕ್ಕೆ ರಘು ದೀಕ್ಷಿತ್ ಅವರನ್ನು ಆಹ್ವಾನಿಸಲಾಗುವುದು ಎಂದರು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ವಿಧಾನಸಭೆಯ ಮಾಜಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಡಿವೈಎಸ್ಪಿ ಸೂರಜ್, ಪೌರಾಯುಕ್ತರಾದ ಎಚ್.ಆರ್. ರಮೇಶ್, ತಹಶಿಲ್ದಾರಾದ ಶ್ರೀಧರ, ನಗರ ದಸರಾ ಸಮಿತಿ ಅಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ವಿವಿಧ ಉಪ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.
ನಗರದ ಶಕ್ತಿ ದೇವತೆಗಳಾದ ಶ್ರೀ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ, ಶ್ರೀ ದಂಡಿನ ಮರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳ ಕರಗಗಳಿಗೆ ಪುಷ್ಪಾಲಂಕೃತವಾಗಿ ಭಕ್ತರ ಜಯಘೋಷದೊಂದಿಗೆ ಮರೆವಣಿಗೆ ಆರಂಭಿಸಿದವು.
ಪೂಜೆ ಸಲ್ಲಿಕೆ ಬಳಿಕ ನಾಲ್ಕು ಶಕ್ತಿ ದೇವತೆಗಳ ಕರಗಗಳು ಮೆರವಣಿಗೆ ಹೊರಟವು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತಿದ್ದಂತೆ ಜನರು ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು. ಪೂಜೆಯ ನಂತರ ಆರಂಭವಾದ ಕರಗ ಉತ್ಸವ ನಗರ ಪ್ರದಕ್ಷಿಣೆಯು ನವರಾತ್ರಿ ದಿನಗಳ ಕಾಲ ಮುಂದುವರಿಯಲಿದೆ. ಶ್ರೀ ಕೋಟೆ ಮಾರಿಯಮ್ಮ ಕರಗವನ್ನು ಪಿ.ಬಿ.ಅನೀಶ್ ಕುಮಾರ್, ಶ್ರೀ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ಕರಗವನ್ನು ಪಿ.ಪಿ. ಚಾಮಿ, ಶ್ರೀ ದಂಡಿನ ಮಾರಿಯಮ್ಮ ಕರಗವನ್ನು ಉಮೇಶ್ ಪೂಜಾರಿ ಹಾಗೂ ಶ್ರೀ ಕಂಚಿ ಕಾಮಾಕ್ಷಿ ಕರಗವನ್ನು ಪಿ.ಸಿ.ಉಮೇಶ್ ಹೊತ್ತಿದ್ದರು.ಕರಗ ಹೊರುವ ಸಂಪ್ರದಾಯ ಮಡಿಕೇರಿಯಲ್ಲಿ ಹಾಲೇರಿ ಅರಸರ ಕಾಲದಲ್ಲಿ ಆರಂಭವಾಯಿತು. ಮಾರಕ ರೋಗವೊಂದು ಸ್ಥಳೀಯರನ್ನು ಕಾಡಿ, ಸಾವು, ನೋವುಗಳಾದಾಗ ಶಕ್ತಿ ದೇವತೆಗಳಾದ ಶ್ರೀ ಕೋಟೆ ಮಾರಿಯಮ್ಮ, ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ ಹಾಗೂ ಕಂಚಿ ಕಾಮಾಕ್ಷಿ ಕರಗವನ್ನು ಹೊರುವ ಸಂಪ್ರದಾಯ ಆರಂಭವಾಯಿತು ಎನ್ನುತ್ತಾರೆ ಹಿರಿಯರು.

ಇತ್ತೀಚಿನ ಸುದ್ದಿ

ಜಾಹೀರಾತು