5:31 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕೊಡಗು ಜೂನಿಯರ್ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಪ್ರಿನ್ಸಿಪಾಲರ ವಿರುದ್ಧ ದೂರು ದಾಖಲು

20/02/2022, 10:22

ಮಡಿಕೇರಿ(reporterkarnataka.com): ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಟಿವಿ ಮಾಧ್ಯಮದ ಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿಗೆ ಮಡಿಕೇರಿಯ ಮುಸ್ಲಿಂ ಜಮಾಅತ್ ಗಳ ಒಕ್ಕೂಟದಿಂದ ದೂರು ನೀಡಲಾಗಿದೆ.

ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಟಿವಿ ಕ್ಯಾಮೆರಾಗಳ ಮುಂದೆ ಏರು ಧ್ವನಿಯಲ್ಲಿ ಗದರಿಸಿ, ಎಫ್ ಐಆರ್ ದಾಖಲಿಸುವ ಬೆದರಿಕೆಯನ್ನು ಹಾಕಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯದಲ್ಲಿ, ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿರುವುದು ಸ್ಪಷ್ಟವಾಗಿದ್ದು, ಇದು ಜೆ.ಜೆ ಕಾಯ್ದೆ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಘಟನೆಯನ್ನು ಚಿತ್ರೀಕರಿಸಲು ಅವಕಾಶ ಮಾಡಿಕೊಟ್ಟು, ಸಾರ್ವಜನಿಕವಾಗಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತಂದಿರುವ ಸದರಿ ವ್ಯಕ್ತಿಯ ವಿರುದ್ಧ ಹಾಗೂ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಿರುವ ಟಿವಿ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು