3:02 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ

04/04/2026, 22:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸಮೀಪದ ಹರದೂರು ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಹರದೂರು – ಕಾಜೂರು ಉರೂಸ್ ಗೆ ಮಸ್ಜಿದುನ್ನೂರ್ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ಹಕೀಂ ಅನ್ವಾರಿಯವರು ಚಾಲನೆ ನೀಡಲಾಯಿತು.
ಕಾಜೂರು ಉರೂಸ್ ಮಕಾಂ ನಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಉರೂಂ ಯಶಸ್ವಿಯಾಗಿ ನಡೆಯಲು ಪ್ರಾರ್ಥಿಸಿದರು.
ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸುಲೈಮಾನ್ ಸಖಾಫಿ ಮಾತನಾಡಿ, ಉರೂಸ್ ಗೆ ಚಾಲನೆ ನೀಡಲಾಗಿದ್ದು, ಸೋಮವಾರದಂದು ಸಮಾರೋಪ ಸಮಾರಂಭ ನಡೆಯಲಿದೆ. ಎಲ್ಲರೂ ಉರೂಸ್ ನಲ್ಲಿ ಭಾಗವಹಿಸುವ ಮೂಲಕ ಉರೂಸನ್ನು ಯಶಸ್ವಿಗೊಳಿಸಬೇಕು ಎಂದರು.
ಹರದೂರು ಗ್ರಾ‌ಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎ.ಮುಸ್ತಫಾ ಮಾತನಾಡಿ, ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕಾಜೂರು ಮಕಾಂ ಉರೂಸ್ ಗೆ ಇಂದು ಚಾಲನೆ ನೀಡಲಾಗಿದೆ. ಉರೂಸ್ ಕೊಡಗಿನ ಎಲ್ಲಾ ಕಡೆಗಳಿಂದಲೂ ಜನರು ಪಾಲ್ಗೊಳ್ಳುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ‌ ಜನರು ಆಗಮಿಸಿ ಉರೂಸ್ ನ‌ ಯಶಸ್ವಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಈ ಸಂದರ್ಭ ಮಸ್ಜಿದುನ್ನೂರು ಮುಸ್ಲಿಂ ಜಮಾಅತ್ ಕಮಿಟಿ‌ ಅಧ್ಯಕ್ಷರಾದ ಅಬ್ದುಲ್ಲಾ, ಕಾರ್ಯದರ್ಶಿ ಅಜ಼ೀಜ಼್, ಖಜಾಂಜಿ ಜ಼ಕ್ರಿಯಾ, ಪ್ರಮುಖರಾದ ಯಾಕೂಬ್, ಉಮರ್ ಹಾಜಿ, ಸೈದು, ರಜ಼ಾಕ್, ಕಾದರ್, ಸಿದ್ದೀಕ್, ಕೆ.ಬಿ.ಶಂಶುದ್ಧೀನ್ ಹಾಗೂ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು