10:26 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆ: ಕಕ್ಕಡ ಪದ್’ನೆಟ್ಟ್ ಪ್ರಯುಕ್ತ ಪಂಜಿನ ಮೆರವಣಿಗೆ

04/08/2025, 14:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಹಿತರಕ್ಷಣಾ ಬಳಗ, ಕ್’ಗ್ಗಟ್ಟ್ ನಾಡ್, ಪೊನ್ನಂಪೇಟೆ ಇವರ ವತಿಯಿಂದ ಭಾನುವಾರ 14ನೇ ವರ್ಷದ ಕಕ್ಕಡ ಪದ್ ‘ನೆಟ್ಟ್ ಹಬ್ಬ ಆಚರಣೆ ಮತ್ತು ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಪಂಜಿನ ಮೆರವಣಿಗೆ ಆಕರ್ಷಕವಾಗಿ ನಡೆಯಿತು.
ಪೊನ್ನಂಪೇಟೆ ಕೊಡವ ಸಮಾಜದಿಂದ ಪಂಜು ಹಿಡಿದು ಸಾಂಪ್ರದಾಯಿಕ ಉಡುಗೆ ತೊಡಗೆಗಳನ್ನು ಧರಿಸಿ ವಾಲಗದೊಂದಿಗೆ ಹೊರಟ ಕೊಡವರು ಬಸವೇಶ್ವರ ದೇವಾಲಯ ಸತ್ತು ಹಾಕಿ ನಂತರ ಕೊಡವ ಸಮಾಜದಲ್ಲಿ ಸಮಾಗಮಗೊಂಡರು.
ಕೊಡವ ಸಮಾಜದಲ್ಲಿ ದಿನದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಟೆಲಿಫಿಲ್ಮ್ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ದಿನದ ಅಂಗವಾಗಿ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮ ಚಿರಿಯಪಂಡ ಎಂ. ರಾಜನಂಜಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಕೊಡವ ಎಜುಕೇಶನ್ ಸೊಸೈಟಿ (ಸಿಐಟಿ) ಅಧ್ಯಕ್ಷರಾದ ಡಾ. ಮುಕ್ಕಾಟಿರ ಸಿ. ಕಾರ್ಯಪ್ಪ, ಮತ್ತು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಹಾಗೂ ಕೊಡವ ಜಾನಪದ ತಜ್ಞ ಕಾಳಿಮಾಡ ಎಂ. ಮೋಟಯ್ಯ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಪ್ರಗತಿಪರ ಕಾಫಿ ಬೆಳೆಗಾರ ಕಳ್ಳಿಚಂಡ ಚಂಗಪ್ಪ, 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ತಂಬಂಡ ಆಶ್ರಯಿ ಅಕ್ಕಮ್ಮ, ದ್ವಿತೀಯ ಪಿ ಯು ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಟ್ರಂಗಡ ಪನ್ಯ ಪೊನ್ನಮ್ಮ ಅವರನ್ನು ಸನ್ಮಾನಿಸಿದರು.
ನಂತರ ಸಾಮೂಹಿಕವಾಗಿ ಸಾಂಪ್ರದಾಯಿಕ ಕಕ್ಕಡ ಖಾದ್ಯ ತಿನಿಸು ಹಾಗೂ ವಿಶೇಷ ಉಟೋಪಚಾರ ಅಚ್ಚುಕಟ್ಟಾಗಿ ನೆರವೇರಿತು. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಸಂಖ್ಯಾ ಕೊಡವರು ಒಟ್ಟಾಗಿ ಸೇರಿ ಕಕ್ಕಡ 18 ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು