9:42 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆ: ಕಕ್ಕಡ ಪದ್’ನೆಟ್ಟ್ ಪ್ರಯುಕ್ತ ಪಂಜಿನ ಮೆರವಣಿಗೆ

04/08/2025, 14:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಹಿತರಕ್ಷಣಾ ಬಳಗ, ಕ್’ಗ್ಗಟ್ಟ್ ನಾಡ್, ಪೊನ್ನಂಪೇಟೆ ಇವರ ವತಿಯಿಂದ ಭಾನುವಾರ 14ನೇ ವರ್ಷದ ಕಕ್ಕಡ ಪದ್ ‘ನೆಟ್ಟ್ ಹಬ್ಬ ಆಚರಣೆ ಮತ್ತು ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಪಂಜಿನ ಮೆರವಣಿಗೆ ಆಕರ್ಷಕವಾಗಿ ನಡೆಯಿತು.
ಪೊನ್ನಂಪೇಟೆ ಕೊಡವ ಸಮಾಜದಿಂದ ಪಂಜು ಹಿಡಿದು ಸಾಂಪ್ರದಾಯಿಕ ಉಡುಗೆ ತೊಡಗೆಗಳನ್ನು ಧರಿಸಿ ವಾಲಗದೊಂದಿಗೆ ಹೊರಟ ಕೊಡವರು ಬಸವೇಶ್ವರ ದೇವಾಲಯ ಸತ್ತು ಹಾಕಿ ನಂತರ ಕೊಡವ ಸಮಾಜದಲ್ಲಿ ಸಮಾಗಮಗೊಂಡರು.
ಕೊಡವ ಸಮಾಜದಲ್ಲಿ ದಿನದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಟೆಲಿಫಿಲ್ಮ್ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ದಿನದ ಅಂಗವಾಗಿ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮ ಚಿರಿಯಪಂಡ ಎಂ. ರಾಜನಂಜಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಕೊಡವ ಎಜುಕೇಶನ್ ಸೊಸೈಟಿ (ಸಿಐಟಿ) ಅಧ್ಯಕ್ಷರಾದ ಡಾ. ಮುಕ್ಕಾಟಿರ ಸಿ. ಕಾರ್ಯಪ್ಪ, ಮತ್ತು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಹಾಗೂ ಕೊಡವ ಜಾನಪದ ತಜ್ಞ ಕಾಳಿಮಾಡ ಎಂ. ಮೋಟಯ್ಯ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಪ್ರಗತಿಪರ ಕಾಫಿ ಬೆಳೆಗಾರ ಕಳ್ಳಿಚಂಡ ಚಂಗಪ್ಪ, 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ತಂಬಂಡ ಆಶ್ರಯಿ ಅಕ್ಕಮ್ಮ, ದ್ವಿತೀಯ ಪಿ ಯು ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಟ್ರಂಗಡ ಪನ್ಯ ಪೊನ್ನಮ್ಮ ಅವರನ್ನು ಸನ್ಮಾನಿಸಿದರು.
ನಂತರ ಸಾಮೂಹಿಕವಾಗಿ ಸಾಂಪ್ರದಾಯಿಕ ಕಕ್ಕಡ ಖಾದ್ಯ ತಿನಿಸು ಹಾಗೂ ವಿಶೇಷ ಉಟೋಪಚಾರ ಅಚ್ಚುಕಟ್ಟಾಗಿ ನೆರವೇರಿತು. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಸಂಖ್ಯಾ ಕೊಡವರು ಒಟ್ಟಾಗಿ ಸೇರಿ ಕಕ್ಕಡ 18 ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು