6:43 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆ: ಕಕ್ಕಡ ಪದ್’ನೆಟ್ಟ್ ಪ್ರಯುಕ್ತ ಪಂಜಿನ ಮೆರವಣಿಗೆ

04/08/2025, 14:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಹಿತರಕ್ಷಣಾ ಬಳಗ, ಕ್’ಗ್ಗಟ್ಟ್ ನಾಡ್, ಪೊನ್ನಂಪೇಟೆ ಇವರ ವತಿಯಿಂದ ಭಾನುವಾರ 14ನೇ ವರ್ಷದ ಕಕ್ಕಡ ಪದ್ ‘ನೆಟ್ಟ್ ಹಬ್ಬ ಆಚರಣೆ ಮತ್ತು ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಪಂಜಿನ ಮೆರವಣಿಗೆ ಆಕರ್ಷಕವಾಗಿ ನಡೆಯಿತು.
ಪೊನ್ನಂಪೇಟೆ ಕೊಡವ ಸಮಾಜದಿಂದ ಪಂಜು ಹಿಡಿದು ಸಾಂಪ್ರದಾಯಿಕ ಉಡುಗೆ ತೊಡಗೆಗಳನ್ನು ಧರಿಸಿ ವಾಲಗದೊಂದಿಗೆ ಹೊರಟ ಕೊಡವರು ಬಸವೇಶ್ವರ ದೇವಾಲಯ ಸತ್ತು ಹಾಕಿ ನಂತರ ಕೊಡವ ಸಮಾಜದಲ್ಲಿ ಸಮಾಗಮಗೊಂಡರು.
ಕೊಡವ ಸಮಾಜದಲ್ಲಿ ದಿನದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಟೆಲಿಫಿಲ್ಮ್ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ದಿನದ ಅಂಗವಾಗಿ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮ ಚಿರಿಯಪಂಡ ಎಂ. ರಾಜನಂಜಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಕೊಡವ ಎಜುಕೇಶನ್ ಸೊಸೈಟಿ (ಸಿಐಟಿ) ಅಧ್ಯಕ್ಷರಾದ ಡಾ. ಮುಕ್ಕಾಟಿರ ಸಿ. ಕಾರ್ಯಪ್ಪ, ಮತ್ತು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಹಾಗೂ ಕೊಡವ ಜಾನಪದ ತಜ್ಞ ಕಾಳಿಮಾಡ ಎಂ. ಮೋಟಯ್ಯ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಪ್ರಗತಿಪರ ಕಾಫಿ ಬೆಳೆಗಾರ ಕಳ್ಳಿಚಂಡ ಚಂಗಪ್ಪ, 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ತಂಬಂಡ ಆಶ್ರಯಿ ಅಕ್ಕಮ್ಮ, ದ್ವಿತೀಯ ಪಿ ಯು ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಟ್ರಂಗಡ ಪನ್ಯ ಪೊನ್ನಮ್ಮ ಅವರನ್ನು ಸನ್ಮಾನಿಸಿದರು.
ನಂತರ ಸಾಮೂಹಿಕವಾಗಿ ಸಾಂಪ್ರದಾಯಿಕ ಕಕ್ಕಡ ಖಾದ್ಯ ತಿನಿಸು ಹಾಗೂ ವಿಶೇಷ ಉಟೋಪಚಾರ ಅಚ್ಚುಕಟ್ಟಾಗಿ ನೆರವೇರಿತು. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಸಂಖ್ಯಾ ಕೊಡವರು ಒಟ್ಟಾಗಿ ಸೇರಿ ಕಕ್ಕಡ 18 ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು