8:28 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

13/08/2025, 20:01

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಸ್ಸಾಂ ಕಾರ್ಮಿಕರು ಇತ್ತೀಚಿನ ದಿನಗಳಲ್ಲಿ ಕೊಡಗಿಗೆ ವಲಸಿಗರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನೆಲೆಯೂರಿದ್ದು. ಅಸ್ಸಾಂ ಕಾರ್ಮಿಕರು ಆಧಾರ್ ಕಾರ್ಡನ್ನು ದುರ್ಬಳಕೆ ಮಾಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತದೆ.
ಮಡಿಕೇರಿ ಇಂಡಿಯನ್ ಬ್ಯಾಂಕ್ ನಲ್ಲಿ ಇಂತಹದೇ ಒಂದು ಘಟನೆ ನಡೆದಿದ್ದು ಅಸ್ಸಾಂ ಕಾರ್ಮಿಕ ನೊಬ್ಬ ಖಾತೆ ತೆರೆಯಲು ಕೊಡಗಿನ ವಿಳಾಸ ಹೊಂದಿರುವ ಆಧಾರ್ ಕಾರ್ಡ್ನೊಂದಿಗೆ ಬಂದಿದ್ದು ಬ್ಯಾಂಕಿನ ಸಿಬ್ಬಂದಿಗಳು ಬಯೋಮೆಟ್ರಿಕ್ ನಲ್ಲಿ ಪರಿಶೀಲಿಸಿದಾಗ ವ್ಯಕ್ತಿಯ ಸಂಪೂರ್ಣ ವಿವರ ಅಸ್ಸಾಂ ವಿಳಾಸವನ್ನು ತೋರಿಸುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ.
ವ್ಯಕ್ತಿಯ ಬಳಿ ಅಸ್ಸಾಮಿನ ವಿಳಾಸ ಹೊಂದಿರುವ ಆಧಾರ್ ಕಾರ್ಡ್, ಕೊಡಗಿನ ವಿಳಾಸ ಹೊಂದಿರುವ ಆಧಾರ ಕಾರ್ಡ್ ಇವೆರಡು ಇರುವುದು ಕಂಡು ಬಂದಿದೆ. ಕೊಡಗಿನಲ್ಲಿ ಇದೇ ರೀತಿ ಹಲವು ಸಂಸ್ಥೆಗಳು ಈ ಸಮಸ್ಯೆಯನ್ನು ಎದುರಿಸುತ್ತಿದೆ ಎನ್ನಲಾಗಿದೆ. ಈ ರೀತಿಯ ಪ್ರಕರಣಗಳ ಕುರಿತು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸಬೇಕೆಂದು ಇಂಡಿಯನ್ ಬ್ಯಾಂಕಿನ ಮ್ಯಾನೇಜರ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು