9:17 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

13/08/2025, 20:01

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಸ್ಸಾಂ ಕಾರ್ಮಿಕರು ಇತ್ತೀಚಿನ ದಿನಗಳಲ್ಲಿ ಕೊಡಗಿಗೆ ವಲಸಿಗರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನೆಲೆಯೂರಿದ್ದು. ಅಸ್ಸಾಂ ಕಾರ್ಮಿಕರು ಆಧಾರ್ ಕಾರ್ಡನ್ನು ದುರ್ಬಳಕೆ ಮಾಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತದೆ.
ಮಡಿಕೇರಿ ಇಂಡಿಯನ್ ಬ್ಯಾಂಕ್ ನಲ್ಲಿ ಇಂತಹದೇ ಒಂದು ಘಟನೆ ನಡೆದಿದ್ದು ಅಸ್ಸಾಂ ಕಾರ್ಮಿಕ ನೊಬ್ಬ ಖಾತೆ ತೆರೆಯಲು ಕೊಡಗಿನ ವಿಳಾಸ ಹೊಂದಿರುವ ಆಧಾರ್ ಕಾರ್ಡ್ನೊಂದಿಗೆ ಬಂದಿದ್ದು ಬ್ಯಾಂಕಿನ ಸಿಬ್ಬಂದಿಗಳು ಬಯೋಮೆಟ್ರಿಕ್ ನಲ್ಲಿ ಪರಿಶೀಲಿಸಿದಾಗ ವ್ಯಕ್ತಿಯ ಸಂಪೂರ್ಣ ವಿವರ ಅಸ್ಸಾಂ ವಿಳಾಸವನ್ನು ತೋರಿಸುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ.
ವ್ಯಕ್ತಿಯ ಬಳಿ ಅಸ್ಸಾಮಿನ ವಿಳಾಸ ಹೊಂದಿರುವ ಆಧಾರ್ ಕಾರ್ಡ್, ಕೊಡಗಿನ ವಿಳಾಸ ಹೊಂದಿರುವ ಆಧಾರ ಕಾರ್ಡ್ ಇವೆರಡು ಇರುವುದು ಕಂಡು ಬಂದಿದೆ. ಕೊಡಗಿನಲ್ಲಿ ಇದೇ ರೀತಿ ಹಲವು ಸಂಸ್ಥೆಗಳು ಈ ಸಮಸ್ಯೆಯನ್ನು ಎದುರಿಸುತ್ತಿದೆ ಎನ್ನಲಾಗಿದೆ. ಈ ರೀತಿಯ ಪ್ರಕರಣಗಳ ಕುರಿತು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸಬೇಕೆಂದು ಇಂಡಿಯನ್ ಬ್ಯಾಂಕಿನ ಮ್ಯಾನೇಜರ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು