5:18 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ

14/02/2026, 17:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿರುವ ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧಿಸಲಾಗಿದೆ.
ನಗರಸಭೆ ವ್ಯಾಪ್ತಿಯಲ್ಲಿ ಇರುವ 23 ವಾರ್ಡ್‍ಗಳನ್ನು ಸರ್ಕಾರ ಸೂಚಿಸಿರುವಂತೆ ಒಡಿಎಫ್ ಪ್ರೋಟೋಕಾಲ್ ಮತ್ತು ಒಡಿಎಫ್+(ಬಯಲು ಶೌಚಾಲಯ ಮುಕ್ತ ಪ್ರದೇಶ) ಶಿಷ್ಟಾಚಾರಗಳಂತೆ ಕ್ರಮ ಅನುಸರಿಸಿ ಘೋಷಣಾ ಪತ್ರ ಪಡೆಯಲಾಗಿದೆ. ಅದರಂತೆ ಈ ಪ್ರಕಟಣೆಯನ್ನು ಸಾರ್ವಜನಿಕ ಮಾಹಿತಿಗಾಗಿ ಪ್ರಚಾರಪಡಿಸಲಾಗಿದ್ದು, ಒಡಿಎಪ್ ಪ್ರೋಟೋಕಾಲ್ ಮತ್ತು ಒಡಿಎಫ್+ (ಬಯಲು ಶೌಚಾಲಯ ಮುಕ್ತ ಪ್ರದೇಶ) ಈಗಾಗಲೇ ಘೋಷಿಸಲಾಗಿದೆ.

ಈ ಸಂಬಂಧ ಬಯಲು ಪ್ರದೇಶದಲ್ಲಿ ಮಲಮೂತ್ರ ವಿಸರ್ಜನೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನೆ ಅಥವಾ ವಾಣಿಜ್ಯ ಪ್ರದೇಶಗಳಿಂದ ಮಲ ಮೂತ್ರದ ತ್ಯಾಜ್ಯವನ್ನು ಚರಂಡಿಗೆ ಹರಿಸಿದಲ್ಲಿ ಬಯಲು ಮೂತ್ರ ವಿಸರ್ಜನೆ ರೂ.500, ಬಯಲು ಮಲ ವಿಸರ್ಜನೆ ರೂ.1,000 ಹಾಗೂ ಸಾರ್ವಜನಿಕ ಚರಂಡಿಗೆ ಮಲ ತ್ಯಾಜ್ಯ ಹರಿಸಿದ್ದಲ್ಲಿ ರೂ.2 ಸಾವಿರ ದಂಡವಿಧಿಸಿ, ಕಾನೂನು ಕ್ರಮವಹಿಸಲಾಗುವುದು. ಮಡಿಕೇರಿ ನಗರಸಭೆಯ ವ್ಯಾಪ್ತಿಯಲ್ಲಿನ ವಸತಿ/ ವಾಣಿಜ್ಯ ಕಟ್ಟಡ ಹೊಂದಿರುವ ಮಾಲೀಕರು ಸೆಪ್ಟಿಕ್ ಟ್ಯಾಂಕ್‍ಗಳನ್ನು ಸ್ವಚ್ಛಗೊಳಿಸಲು ನಗರಸಭೆಯ ಸಕ್ಕಿಂಗ್ ಯಂತ್ರವನ್ನು ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು