ಇತ್ತೀಚಿನ ಸುದ್ದಿ
*Kodagu | ಬಿಜೆಪಿ ತೊರೆದು 40ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ*
16/09/2026, 20:15
ಗಿರಿಧರ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ 40ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್ ಅವರ ನೇತೃತ್ವದಲ್ಲಿ ಇಂದು 40ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು, ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.ಎಲ್ಲರಿಗೂ ಪಕ್ಷದ ಶಲ್ಯ ಹೊದಿಸಿ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು.

ಪಕ್ಷ ಸೇರ್ಪಡೆಗೊಂಡ ಪ್ರಮುಖರು ಮಾತನಾಡಿ, ಶಾಸಕರು ಮಾಡುತ್ತಿರುವ ಸಮಾಜಮುಖಿ ಕಾರ್ಯ ಹಾಗೂ ಜನಪರ ಕಾಳಜಿಯನ್ನು ಮೆಚ್ಚಿ ಅವರಿಗೆ ಮತ್ತಷ್ಟು ಬಲ ನೀಡುವ ಸಲುವಾಗಿ ತಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದರು.
ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಅಪ್ಪಚಂಗಡ ಪಿ. ಮೋಟಯ್ಯ, ತಿತೀರ ಪ್ರಭು, ಪೆಮ್ಮಂಡ ಅರುಣಾ, ಚೊಟ್ಟೆಯಾಂಡಮಡ ವಿಶು, ಕುಪ್ಪಣ್ಣಮಡ ಪ್ರೀತಮ್, ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಹರೀಶ್ ಪೂವಯ್ಯ, ಬೊಟ್ಟಂಗಡ ಜಗದೀಶ್, ರೋಬಿನ್, ಕಟ್ಟೇರ ಗಣೇಶ, ಕಳಕಂಡ ಜೀತು, ಅಣ್ಣಿರ ಹರೀಶ್,ಬೋಪಯ್ಯ, ಮಹಾದೇವ, ನಾಸಿರ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.












