11:19 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ ಕಾಡಿಗೆ

13/07/2025, 11:01

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterarnataka@gmail.com

ವಿರಾಜಪೇಟೆ ವಿಭಾಗದ ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಸಲುವಾಗಿ ಹಮ್ಮಿಕೊಂಡಿದ್ದ 2 ದಿನಗಳ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ ಗುಂಪು ಸೇರಿ ಒಟ್ಟು 18 ಕಾಡಾನೆಗಳನ್ನು ಯಶಸ್ವಿಯಾಗಿ ಕಾಡಿಗೆ ಅಟ್ಟಲಾಗಿರುತ್ತದೆ.
ಜುಲೈ 10ರಂದು ಮಾಯಮುಡಿ ಗ್ರಾಮದ ಅಂಬುಕೋಟೆಯಿಂದ ಅನನ್ಯ ಗುಂಪಿಗೆ ಸೇರಿದ 7 ಕಾಡಾನೆಗಳು ಹಾಗೂ ಮಾಯಮುಡಿ ಗ್ರಾಮ ಪಂಚಾಯಿತಿ ಬಳಿಯಿಂದ 2 ಗಂಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಕಾಡಾನೆಗಳನ್ನು ದೇವಮಚ್ಚಿಯ ಬಳಿ ಮಾವುಕಲ್‌ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿರುತ್ತದೆ.
ಜುಲೈ 11ರಂದು ಅರವತೊಕ್ಲು ಗ್ರಾಮದಲ್ಲಿ ಬೀಡುಬಿಟ್ಟಿದ್ದ NE-4 ಗುಂಪಿನ 9 ಕಾಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಕಾಡಾನೆಗಳನ್ನು ನೊಖ್ಯಸಿದ್ದಾಪುರ ಗ್ರಾಮದ ಕುಂಜುರಾಮನ ಕಟ್ಟೆ ಬಳಿ ಅರಿಕೇರಿ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣರವರ ಸೂಚನೆಯ ಮೇರೆಗೆ ಎನ್. ಜಗನ್ನಾಥ್‌, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ವಿರಾಜಪೇಟೆ ವಿಭಾಗರವರ ಮಾರ್ಗದರ್ಶನದಲ್ಲಿ ಕೆ.ಪಿ. ಗೋಪಾಲ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ತಿತಿಮತಿ ಉಪ ವಿಭಾಗರವರ ನೇತೃತ್ವದಲ್ಲಿ ಕೈಗೊಳ್ಳಲಾಗಿತ್ತು. ಅಲ್ಲದೇ ತಿತಿಮತಿ ಪ್ರಾದೇಶಿಕ ವಲಯ, ಆನೆಚೌಕೂರು ವನ್ಯಜೀವಿ ವಲಯ, ತಿತಿಮತಿ ಆನೆ ಕಾರ್ಯಪಡೆ, ಪೊನ್ನಂಪೇಟೆ ವಲಯ ಹಾಗೂ ಮಾಕುಟ್ಟ ವನ್ಯಜೀವಿ ವಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು