7:37 PM Monday16 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

Kodagu | ಪಿರಿಯಾಪಟ್ಟಣ: ಒಂದೇ ದಿನ 430 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಅರ್ಪಣೆ

27/04/2025, 12:04

ಪಿರಿಯಾಪಟ್ಟಣ(reporterkarnataka.com): ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.
ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ‌ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.


ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ ಎಂದು ವಿವರಿಸಿದರು.
ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎಂದರು.
ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಟೀಕಿಸಿದರು.
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು ಜನರ ದಿಕ್ಕು ತಪ್ಪಿಸಿ ಕಾಲ‌ ಕಳೆದು ಮನೆಗೆ ಹೋದರು ಎಂದು ವಿವರಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು