1:56 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಪಿರಿಯಾಪಟ್ಟಣ: ಒಂದೇ ದಿನ 430 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಅರ್ಪಣೆ

27/04/2025, 12:04

ಪಿರಿಯಾಪಟ್ಟಣ(reporterkarnataka.com): ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.
ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ‌ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.


ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ ಎಂದು ವಿವರಿಸಿದರು.
ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎಂದರು.
ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಟೀಕಿಸಿದರು.
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು ಜನರ ದಿಕ್ಕು ತಪ್ಪಿಸಿ ಕಾಲ‌ ಕಳೆದು ಮನೆಗೆ ಹೋದರು ಎಂದು ವಿವರಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು