9:10 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

Kodagu | ಪೊನ್ನoಪೇಟೆ: ಪತ್ನಿಯ ಮೇಲೆ ಗುಂಡು ಹಾರಿಸಿದ ಯೋಧ ಪತಿಯ ಬಂಧನ

24/09/2025, 15:37

ಗಿರಿಧರ್ ಕೊಂಪುಳಿರ ಮಡಿಕೇರಿ

info.repoeterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದಲ್ಲಿ ಪತ್ನಿ ದೀಪಿಕಾ ದೇಚಮ್ಮ ಮೇಲೆ ಗುಂಡು ಹಾರಿಸಿದ್ದ ಪತಿ ವಿನು ಕಾರ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿನು ಕಾರ್ಯಪ್ಪ ಸೈನಿಕನಾಗಿದ್ದು, ಪಂಜಾಬ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು, ಇತ್ತೀಚಿಗೆ ರಜೆ ಮೇಲೆ ಕಡಂಗ ದಲ್ಲಿರುವ ತನ್ನ ಮನೆಗೆ ಬಂದಿದ್ದು, ತನ್ನ ತವರು ಮನೆಯಲ್ಲಿದ್ದ ಪತ್ನಿ ದೀಪಿಕಾ ಮನೆಗೆ ಪಾನಮತ್ತ ನಾಗಿ ಬಂದೂಕು ಸಮೇತ ಬಂದಿದ್ದು, ತನ್ನ ಮಗುವಿನ ನೊಂದಿಗೆ ಟಿವಿ ವೀಕ್ಷಿಸುತ್ತಿದ್ದ ದೀಪಿಕಾ ಮೇಲೆ ಗುಂಡು ಹಾರಿಸಿದ್ದು, ಮುಖದ ಬಲ ಭಾಗ ಛಿದ್ರ ಗೊಂಡಿದ್ದು, ಎರಡನೇ ಸುತ್ತು ಗುಂಡು ಹಾರಿಸುವ ಸಂದರ್ಭ ಆರೋಪಿಯ ಕೈ ಯಿಂದ ದೀಪಿಕಾ ತಾಯಿ ಕಸಿದುಕೊಂಡಿದ್ದು, ಹೆಚ್ಚಿನ ಅಪಾಯ ತಪ್ಪಿದೆ. ಕೃತ್ಯ ಎಸಗಿ ಪರಾರಿ ಆಗಿದ್ದ ಆರೋಪಿಯನ್ನು ಶ್ರೀಮಂಗಲ ಮತ್ತು ಪೊನ್ನoಪೇಟೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಘಟನೆಗೆ ಕೌಟುಂಬಿಕ ಕಾರಣ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು