4:08 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಮತ್ತು ಕಾರು ಡಿಕ್ಕಿ

05/09/2025, 21:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಬೇರೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಸಡನ್ ಆಗಿ ಬ್ರೇಕ್ ಹಾಕಿದಕ್ಕೆ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಅಡ್ಡವಾಗಿ ತಿರುಗಿ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಅಪ್ಪಳಿಸಿರುವ ಮತ್ತು ಅದೇ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿರುವ ಘಟನೆ ವರದಿಯಾಗಿದೆ.


ಇಂದು ಮಧ್ಯಾಹ್ನ ಕೊಡಗರಹಳ್ಳಿ ಸಮೀಪದ ಮಾರುತಿ ನಗರದಲ್ಲಿ ಈ ಸರಣಿ ಅಪಘಾತ ಸಂಭವಿಸಿದೆ.
ಕೂಡಿಗೆಯ ಆನಿ ಎಂಬುವವರ ಟ್ರ್ಯಾಕ್ಟರ್ ಅನ್ನು ಇಂದು ಮಧ್ಯಾಹ್ನ ರೇವಣ್ಣ ಎಂಬುವವರು ಕೆದಕಲ್ ನಿಂದ ಕೂಡಿಗೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು. ಮಾರ್ಗಮಧ್ಯದ ಮಾರುತಿ ನಗರದ ತಿರುವಿನಲ್ಲಿ ವಾಹನವೊಂದಕ್ಕೆ ಸೈಡ್ ಕೊಡಲೆಂದು ಟ್ರ್ಯಾಕ್ಟರ್ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ್ದಾನೆ ಎಂದು ಹೇಳಲಾಗಿದೆ. ಇದರಿಂದಾಗಿ ನಿಯಂತ್ರಣ ಕಳೆದುಕೊಂಡ ಟ್ರಾಕ್ಟರ್ ನ ಇಂಜಿನ್ ಭಾಗ ರಸ್ತೆಯ ಬಲಭಾಗಕ್ಕೆ ಅಡ್ಡವಾಗಿ ತಿರುಗಿ ನಿಂತುಕೊಂಡಿದೆ. ಇದೇ ಸಂದರ್ಭ ಕುಶಾಲನಗರ ಕಡೆಯಿಂದ ಮಡಿಕೇರಿಗೆ ಜೆಲ್ಲಿ ಕಲ್ಲು ತುಂಬಿಸಿಕೊಂಡು ಬರುತ್ತಿದ್ದ ಟಿಪ್ಪರ್ ಟ್ರಾಕ್ಟರ್ ನ ಇಂಜಿನ್ ಗೆ ಅಪ್ಪಳಿಸಿದೆ ಅಲ್ಲದೇ ಟ್ರಾಕ್ಟರ್ ನ ಹಿಂದೆ ಬರುತ್ತಿದ್ದ ಕಾರುವೊಂದು ಟ್ರಾಕ್ಟರ್ ಗೆ ಅಲ್ಪ ಪ್ರಮಾಣದಲ್ಲಿ ಗುದ್ದಿದೆ. ಟಿಪ್ಪರ್ ಅಪ್ಪಳಿಸಿದ ರಭಸಕ್ಕೆ ಟ್ರಾಕ್ಟರ್ ನ ಮುಂಭಾಗದ ಟಯರ್ ಕಿತ್ತು ಬಂದು ನಜ್ಜುಗುಜ್ಜುಗೊಂಡಿದೆ. ಟ್ರ್ಯಾಕ್ಟರ್ ಗೆ ಗುದ್ದಿದ ನಂತರ ಟಿಪ್ಪರ್ ರಸ್ತೆಬದಿಯ ಅಂಚಿನೊಳಗೆ ನುಸುಳಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಬೇಟಿ ನೀಡಿದ ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು