4:18 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಮತ್ತು ಕಾರು ಡಿಕ್ಕಿ

05/09/2025, 21:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಬೇರೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಸಡನ್ ಆಗಿ ಬ್ರೇಕ್ ಹಾಕಿದಕ್ಕೆ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಅಡ್ಡವಾಗಿ ತಿರುಗಿ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಅಪ್ಪಳಿಸಿರುವ ಮತ್ತು ಅದೇ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿರುವ ಘಟನೆ ವರದಿಯಾಗಿದೆ.


ಇಂದು ಮಧ್ಯಾಹ್ನ ಕೊಡಗರಹಳ್ಳಿ ಸಮೀಪದ ಮಾರುತಿ ನಗರದಲ್ಲಿ ಈ ಸರಣಿ ಅಪಘಾತ ಸಂಭವಿಸಿದೆ.
ಕೂಡಿಗೆಯ ಆನಿ ಎಂಬುವವರ ಟ್ರ್ಯಾಕ್ಟರ್ ಅನ್ನು ಇಂದು ಮಧ್ಯಾಹ್ನ ರೇವಣ್ಣ ಎಂಬುವವರು ಕೆದಕಲ್ ನಿಂದ ಕೂಡಿಗೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು. ಮಾರ್ಗಮಧ್ಯದ ಮಾರುತಿ ನಗರದ ತಿರುವಿನಲ್ಲಿ ವಾಹನವೊಂದಕ್ಕೆ ಸೈಡ್ ಕೊಡಲೆಂದು ಟ್ರ್ಯಾಕ್ಟರ್ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ್ದಾನೆ ಎಂದು ಹೇಳಲಾಗಿದೆ. ಇದರಿಂದಾಗಿ ನಿಯಂತ್ರಣ ಕಳೆದುಕೊಂಡ ಟ್ರಾಕ್ಟರ್ ನ ಇಂಜಿನ್ ಭಾಗ ರಸ್ತೆಯ ಬಲಭಾಗಕ್ಕೆ ಅಡ್ಡವಾಗಿ ತಿರುಗಿ ನಿಂತುಕೊಂಡಿದೆ. ಇದೇ ಸಂದರ್ಭ ಕುಶಾಲನಗರ ಕಡೆಯಿಂದ ಮಡಿಕೇರಿಗೆ ಜೆಲ್ಲಿ ಕಲ್ಲು ತುಂಬಿಸಿಕೊಂಡು ಬರುತ್ತಿದ್ದ ಟಿಪ್ಪರ್ ಟ್ರಾಕ್ಟರ್ ನ ಇಂಜಿನ್ ಗೆ ಅಪ್ಪಳಿಸಿದೆ ಅಲ್ಲದೇ ಟ್ರಾಕ್ಟರ್ ನ ಹಿಂದೆ ಬರುತ್ತಿದ್ದ ಕಾರುವೊಂದು ಟ್ರಾಕ್ಟರ್ ಗೆ ಅಲ್ಪ ಪ್ರಮಾಣದಲ್ಲಿ ಗುದ್ದಿದೆ. ಟಿಪ್ಪರ್ ಅಪ್ಪಳಿಸಿದ ರಭಸಕ್ಕೆ ಟ್ರಾಕ್ಟರ್ ನ ಮುಂಭಾಗದ ಟಯರ್ ಕಿತ್ತು ಬಂದು ನಜ್ಜುಗುಜ್ಜುಗೊಂಡಿದೆ. ಟ್ರ್ಯಾಕ್ಟರ್ ಗೆ ಗುದ್ದಿದ ನಂತರ ಟಿಪ್ಪರ್ ರಸ್ತೆಬದಿಯ ಅಂಚಿನೊಳಗೆ ನುಸುಳಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಬೇಟಿ ನೀಡಿದ ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು