1:46 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಮತ್ತು ಕಾರು ಡಿಕ್ಕಿ

05/09/2025, 21:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಬೇರೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಸಡನ್ ಆಗಿ ಬ್ರೇಕ್ ಹಾಕಿದಕ್ಕೆ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಅಡ್ಡವಾಗಿ ತಿರುಗಿ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಅಪ್ಪಳಿಸಿರುವ ಮತ್ತು ಅದೇ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿರುವ ಘಟನೆ ವರದಿಯಾಗಿದೆ.


ಇಂದು ಮಧ್ಯಾಹ್ನ ಕೊಡಗರಹಳ್ಳಿ ಸಮೀಪದ ಮಾರುತಿ ನಗರದಲ್ಲಿ ಈ ಸರಣಿ ಅಪಘಾತ ಸಂಭವಿಸಿದೆ.
ಕೂಡಿಗೆಯ ಆನಿ ಎಂಬುವವರ ಟ್ರ್ಯಾಕ್ಟರ್ ಅನ್ನು ಇಂದು ಮಧ್ಯಾಹ್ನ ರೇವಣ್ಣ ಎಂಬುವವರು ಕೆದಕಲ್ ನಿಂದ ಕೂಡಿಗೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು. ಮಾರ್ಗಮಧ್ಯದ ಮಾರುತಿ ನಗರದ ತಿರುವಿನಲ್ಲಿ ವಾಹನವೊಂದಕ್ಕೆ ಸೈಡ್ ಕೊಡಲೆಂದು ಟ್ರ್ಯಾಕ್ಟರ್ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ್ದಾನೆ ಎಂದು ಹೇಳಲಾಗಿದೆ. ಇದರಿಂದಾಗಿ ನಿಯಂತ್ರಣ ಕಳೆದುಕೊಂಡ ಟ್ರಾಕ್ಟರ್ ನ ಇಂಜಿನ್ ಭಾಗ ರಸ್ತೆಯ ಬಲಭಾಗಕ್ಕೆ ಅಡ್ಡವಾಗಿ ತಿರುಗಿ ನಿಂತುಕೊಂಡಿದೆ. ಇದೇ ಸಂದರ್ಭ ಕುಶಾಲನಗರ ಕಡೆಯಿಂದ ಮಡಿಕೇರಿಗೆ ಜೆಲ್ಲಿ ಕಲ್ಲು ತುಂಬಿಸಿಕೊಂಡು ಬರುತ್ತಿದ್ದ ಟಿಪ್ಪರ್ ಟ್ರಾಕ್ಟರ್ ನ ಇಂಜಿನ್ ಗೆ ಅಪ್ಪಳಿಸಿದೆ ಅಲ್ಲದೇ ಟ್ರಾಕ್ಟರ್ ನ ಹಿಂದೆ ಬರುತ್ತಿದ್ದ ಕಾರುವೊಂದು ಟ್ರಾಕ್ಟರ್ ಗೆ ಅಲ್ಪ ಪ್ರಮಾಣದಲ್ಲಿ ಗುದ್ದಿದೆ. ಟಿಪ್ಪರ್ ಅಪ್ಪಳಿಸಿದ ರಭಸಕ್ಕೆ ಟ್ರಾಕ್ಟರ್ ನ ಮುಂಭಾಗದ ಟಯರ್ ಕಿತ್ತು ಬಂದು ನಜ್ಜುಗುಜ್ಜುಗೊಂಡಿದೆ. ಟ್ರ್ಯಾಕ್ಟರ್ ಗೆ ಗುದ್ದಿದ ನಂತರ ಟಿಪ್ಪರ್ ರಸ್ತೆಬದಿಯ ಅಂಚಿನೊಳಗೆ ನುಸುಳಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಬೇಟಿ ನೀಡಿದ ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು