6:36 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

Kodagu | ಶನಿವಾರಸಂತೆಯ ಮಾಲಂಬಿ ಬೆಟ್ಟದಲ್ಲಿ ಮಳೆಗಾಗಿ ಪೂಜೆ

21/04/2026, 17:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶನಿವಾರಸಂತೆ ಸಮೀಪದ ಮಾಲಂಬಿ ಗ್ರಾಮದ ದೇವರುಗಳ ಸಮಿತಿ ವತಿಯಿಂದ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಬಸವಣ್ಣ ಮತ್ತು ಶ್ರೀ ಕನ್ನಂಬಾಡಿ ಅಮ್ಮನವರ ದೇವರ ವಾರ್ಷಿಕ ಪೂಜಾ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ದೇವರ ಪೂಜಾ ಮಹೋತ್ಸವ ಮತ್ತು ವಾರ್ಷಿಕ ಪೂಜೆ ಅಂಗವಾಗಿ ಸೋಮವಾರ ಬೆಳಗ್ಗೆ ದೇವಸ್ಥಾನ ಸಮಿತಿ, ಗ್ರಾಮಸ್ಥರು, ಭಕ್ತರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ವಾದ್ಯಗೋಷ್ಠಿಯೊಂದಿಗೆ ಮಾಲಂಬಿ ಶ್ರೀ ಮಳೆ ಮಲ್ಲೇಶ್ವರ ಬೆಟ್ಟವನ್ನೇರಿದರು.ನಂತರ ಬೆಟ್ಟದ ಮೇಲಿರುವ ಶ್ರೀ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಅರ್ಚಕರು ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಮತ್ತು ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಕ್ತರಿಗೆ ತೀರ್ಥ, ಪ್ರಸಾದ ವಿನಿಯೋಗ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು