5:28 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Kodagu | ಶನಿವಾರಸಂತೆಯ ಮಾಲಂಬಿ ಬೆಟ್ಟದಲ್ಲಿ ಮಳೆಗಾಗಿ ಪೂಜೆ

21/04/2026, 17:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶನಿವಾರಸಂತೆ ಸಮೀಪದ ಮಾಲಂಬಿ ಗ್ರಾಮದ ದೇವರುಗಳ ಸಮಿತಿ ವತಿಯಿಂದ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಬಸವಣ್ಣ ಮತ್ತು ಶ್ರೀ ಕನ್ನಂಬಾಡಿ ಅಮ್ಮನವರ ದೇವರ ವಾರ್ಷಿಕ ಪೂಜಾ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ದೇವರ ಪೂಜಾ ಮಹೋತ್ಸವ ಮತ್ತು ವಾರ್ಷಿಕ ಪೂಜೆ ಅಂಗವಾಗಿ ಸೋಮವಾರ ಬೆಳಗ್ಗೆ ದೇವಸ್ಥಾನ ಸಮಿತಿ, ಗ್ರಾಮಸ್ಥರು, ಭಕ್ತರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ವಾದ್ಯಗೋಷ್ಠಿಯೊಂದಿಗೆ ಮಾಲಂಬಿ ಶ್ರೀ ಮಳೆ ಮಲ್ಲೇಶ್ವರ ಬೆಟ್ಟವನ್ನೇರಿದರು.ನಂತರ ಬೆಟ್ಟದ ಮೇಲಿರುವ ಶ್ರೀ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಅರ್ಚಕರು ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಮತ್ತು ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಕ್ತರಿಗೆ ತೀರ್ಥ, ಪ್ರಸಾದ ವಿನಿಯೋಗ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು