7:18 PM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ

23/08/2025, 18:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಂಗಳದಲ್ಲಿ ಚೆಲ್ಲಾಪಿಲ್ಲಿ ಯಾಗಿರುವ ಹೂವು ಕುಂಡಗಳು, ಮನೆಯ ಗೋಡೆಗಳಿಗೆ ತಿವಿತ, ಮುರಿದು ಬಿದ್ದಿರುವ ಬಾಸ್ಕೆಟ್ ಬಾಲ್ ಪೋಲ್, ಕಾಫಿ-ಹಣ್ಣಿನ ಗಿಡಗಳು ಸರ್ವನಾಶ, ಎಲ್ಲೆಂದರಲ್ಲಿ ಆನೆಯ ಲದ್ದಿ. ಹೌದು ಇದು ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ವಂದನಾಪುರ ಕಾಫಿ ಎಸ್ಟೇಟ್ ಮನೆಯ ಆವರಣದಲ್ಲಿ ಕಂಡು ಬಂದ ದೃಶ್ಯಗಳು.


ಕಳೆದ ರಾತ್ರಿ ಹೊತ್ತಿನಲ್ಲಿ ಆನೆಗಳ ಹಿಂಡು ಮನೆಯ ಅವರಣಕ್ಕೆ ಪ್ರವೇಶಿಸಿದ್ದು, ಆನೆಗಳ ಆರ್ಭಟಕ್ಕೆ ಧ್ವoಸ ಗೊಂಡಿರುವ ವಸ್ತುಗಳು ಸಾಕ್ಷಿ ಹೇಳುತ್ತಿವೆ. ದಾಳಿ ಬಳಿಕ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದ್ದ್ದು, ಆಗಿರುವ ನಷ್ಟ ಅರಣ್ಯ ಇಲಾಖೆ ತುಂಬಲಿದೆಯೇ ಎನ್ನುವುದು ಎದ್ದಿರುವ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು