5:54 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ

23/08/2025, 18:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಂಗಳದಲ್ಲಿ ಚೆಲ್ಲಾಪಿಲ್ಲಿ ಯಾಗಿರುವ ಹೂವು ಕುಂಡಗಳು, ಮನೆಯ ಗೋಡೆಗಳಿಗೆ ತಿವಿತ, ಮುರಿದು ಬಿದ್ದಿರುವ ಬಾಸ್ಕೆಟ್ ಬಾಲ್ ಪೋಲ್, ಕಾಫಿ-ಹಣ್ಣಿನ ಗಿಡಗಳು ಸರ್ವನಾಶ, ಎಲ್ಲೆಂದರಲ್ಲಿ ಆನೆಯ ಲದ್ದಿ. ಹೌದು ಇದು ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ವಂದನಾಪುರ ಕಾಫಿ ಎಸ್ಟೇಟ್ ಮನೆಯ ಆವರಣದಲ್ಲಿ ಕಂಡು ಬಂದ ದೃಶ್ಯಗಳು.


ಕಳೆದ ರಾತ್ರಿ ಹೊತ್ತಿನಲ್ಲಿ ಆನೆಗಳ ಹಿಂಡು ಮನೆಯ ಅವರಣಕ್ಕೆ ಪ್ರವೇಶಿಸಿದ್ದು, ಆನೆಗಳ ಆರ್ಭಟಕ್ಕೆ ಧ್ವoಸ ಗೊಂಡಿರುವ ವಸ್ತುಗಳು ಸಾಕ್ಷಿ ಹೇಳುತ್ತಿವೆ. ದಾಳಿ ಬಳಿಕ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದ್ದ್ದು, ಆಗಿರುವ ನಷ್ಟ ಅರಣ್ಯ ಇಲಾಖೆ ತುಂಬಲಿದೆಯೇ ಎನ್ನುವುದು ಎದ್ದಿರುವ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು