8:34 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ ಪತ್ತೆ

19/08/2025, 20:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಸೋಮವಾರಪೇಟೆ ಸಮೀಪದ ಪುಷ್ಪಗಿರಿ ಹೈಡೆಲ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಣಕೋಡು ಗ್ರಾಮದ ಚಿದಾನಂದ (27) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಭಾನುವಾರ ರಾತ್ರಿ ಚಿದಾನಂದನು ತಾನು ಕೆಲಸ ಮಾಡುತ್ತಿದ್ದ ಘಟಕದಲ್ಲಿಯೇ ನೀರಿಗೆ ಧುಮುಕಿದ್ದು, ಆ ಕ್ಷಣವನ್ನು ವಿದ್ಯುತ್ ಘಟಕದ ಸಿಸಿಟಿವಿ ಕ್ಯಾಮೆರಾಗಳು ಸೆರೆ ಹಿಡಿದಿವೆ. ಆತ್ಮಹತ್ಯೆ ಮಾಡಲು ಹೊರಟಿರುವುದಾಗಿ ತನ್ನ ಸ್ನೇಹಿತರಿಗೆ ಮೊಬೈಲ್ ಮೆಸೇಜ್ ಕಳುಹಿಸಿದ್ದಾನೆಂದು ವೃತ್ತ ನಿರೀಕ್ಷಕರದ ಮುದ್ದುಮಾದೇವ ತಿಳಿಸಿದ್ದಾರೆ.
ಸೋಮವಾರ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಜಲಾಶಯದಲ್ಲಿ ಹುಡುಕಾಟ ನಡೆಸಿದರೂ ಸುಳಿವು ದೊರಕಲಿಲ್ಲ. ಮಂಗಳವಾರ ಸ್ಥಳೀಯರು ತಾವೇ ಹುಡುಕಾಟ ಕೈಗೊಂಡು, ಮಧ್ಯಾಹ್ನ ವೇಳೆಗೆ ಘಟಕದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ಮರದ ಬಡಕ್ಕೆ ಸಿಕ್ಕಿಕೊಂಡಿದ್ದ ಮೃತದೇಹವನ್ನು ಪತ್ತೆ ಹಚ್ಚಿದರು.
ನೀರಿನ ರಭಸವನ್ನು ಲೆಕ್ಕಿಸದೆ ಬೀದಳ್ಳಿ ಗ್ರಾಮದ ಯುವಕರಾದ ಪುಟ್ಟ, ಪ್ರವೀಣ್, ಕಿರಣ್, ರವಿ, ವಿನೋದ್, ದೀಕ್ಷಿತ್ ಹಾಗೂ ಗಿರೀಶ್ ಶೌರ್ಯ ತೋರಿಸಿ ಮೃತದೇಹವನ್ನು ದಡಕ್ಕೆ ತರಲು ಯಶಸ್ವಿಯಾದರು.
ಸ್ಥಳಕ್ಕೆ ತಲುಪಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು