8:50 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ ಪತ್ತೆ

19/08/2025, 20:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಸೋಮವಾರಪೇಟೆ ಸಮೀಪದ ಪುಷ್ಪಗಿರಿ ಹೈಡೆಲ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಣಕೋಡು ಗ್ರಾಮದ ಚಿದಾನಂದ (27) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಭಾನುವಾರ ರಾತ್ರಿ ಚಿದಾನಂದನು ತಾನು ಕೆಲಸ ಮಾಡುತ್ತಿದ್ದ ಘಟಕದಲ್ಲಿಯೇ ನೀರಿಗೆ ಧುಮುಕಿದ್ದು, ಆ ಕ್ಷಣವನ್ನು ವಿದ್ಯುತ್ ಘಟಕದ ಸಿಸಿಟಿವಿ ಕ್ಯಾಮೆರಾಗಳು ಸೆರೆ ಹಿಡಿದಿವೆ. ಆತ್ಮಹತ್ಯೆ ಮಾಡಲು ಹೊರಟಿರುವುದಾಗಿ ತನ್ನ ಸ್ನೇಹಿತರಿಗೆ ಮೊಬೈಲ್ ಮೆಸೇಜ್ ಕಳುಹಿಸಿದ್ದಾನೆಂದು ವೃತ್ತ ನಿರೀಕ್ಷಕರದ ಮುದ್ದುಮಾದೇವ ತಿಳಿಸಿದ್ದಾರೆ.
ಸೋಮವಾರ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಜಲಾಶಯದಲ್ಲಿ ಹುಡುಕಾಟ ನಡೆಸಿದರೂ ಸುಳಿವು ದೊರಕಲಿಲ್ಲ. ಮಂಗಳವಾರ ಸ್ಥಳೀಯರು ತಾವೇ ಹುಡುಕಾಟ ಕೈಗೊಂಡು, ಮಧ್ಯಾಹ್ನ ವೇಳೆಗೆ ಘಟಕದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ಮರದ ಬಡಕ್ಕೆ ಸಿಕ್ಕಿಕೊಂಡಿದ್ದ ಮೃತದೇಹವನ್ನು ಪತ್ತೆ ಹಚ್ಚಿದರು.
ನೀರಿನ ರಭಸವನ್ನು ಲೆಕ್ಕಿಸದೆ ಬೀದಳ್ಳಿ ಗ್ರಾಮದ ಯುವಕರಾದ ಪುಟ್ಟ, ಪ್ರವೀಣ್, ಕಿರಣ್, ರವಿ, ವಿನೋದ್, ದೀಕ್ಷಿತ್ ಹಾಗೂ ಗಿರೀಶ್ ಶೌರ್ಯ ತೋರಿಸಿ ಮೃತದೇಹವನ್ನು ದಡಕ್ಕೆ ತರಲು ಯಶಸ್ವಿಯಾದರು.
ಸ್ಥಳಕ್ಕೆ ತಲುಪಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು