3:53 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

25/11/2025, 15:49

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಪಘಾತಕ್ಕೆ ಈಡಾಗಿದ್ದ ಮಗನ ಸ್ಥಿತಿ ನೋಡಲಾಗದೆ ನೊಂದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ತೂಚಮಕೇರಿ ಗ್ರಾಮದಲ್ಲಿ ನಡೆದಿದೆ.


ಗ್ರಾಮದ ಸುರೇಶ್ ಎಂಬುವರ ಪತ್ನಿ ಸುಮಿತ(48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಳೆದ ಎರಡು ತಿಂಗಳ ಹಿಂದೆ ಸುಮಿತ ಅವರ ಪುತ್ರನಿಗೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಿಂದ ಮಾನಸಿಕವಾಗಿ ಸಾಕಷ್ಟು ಕುಂದಿದ್ದರು ಎನ್ನಲಾಗಿದೆ.ನವೆಂಬರ್ 23 ರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಬೆಳಗಿನ ತಿಂಡಿಗೆಂದು ಚಪಾತಿ ಹಿಟ್ಟು ಕಲಿಸಿದ್ದು ಬಳಿಕ ನಾಪತ್ತೆಯಾಗಿದ್ದರು. ಸುಮಿತ ಪತಿ ಸುರೇಶ್ ಸುತ್ತ ಮುತ್ತ ಹುಡುಕಾಟ ನಡೆಸಿದ್ದರು,ಬಳಿಕ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಗ್ರಾಮಸ್ಥರೆಲ್ಲರೂ ಹುಡುಕಾಟಕ್ಕೆ ತೊಡಗಿದ್ದಾಗ ಗ್ರಾಮದ ಅಪ್ಪಾಜಿ ಎಂಬುವವರಿಗೆ ಸೇರಿದ ಕೆರೆಯಲ್ಲಿ ಮೃತದೇಹ ಕಂಡು ಬಂದಿದ್ದು, ಸ್ಥಳೀಯರ ಸಹಾಯದಿಂದ ಮೃತದೇಹ ವನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಕುಟುಂಬಸ್ತರಿಗೆ ಹಸ್ತಾಂತರ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು