12:16 AM Friday31 - October 2025
ಬ್ರೇಕಿಂಗ್ ನ್ಯೂಸ್
Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:…

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ ಮಹಿಳೆ ಗಂಭೀರ ಗಾಯ

31/10/2025, 22:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆಯಲ್ಲಿ ಬೆಳಿಗ್ಗೆ ಅಂಗನವಾಡಿಗೆ ತೆರಳುತ್ತಿದ್ದ ಮಗುವಿಗೆ ಬೀದಿ ನಾಯಿಯೊಂದು ಕಚ್ಚಿ ಗಾಯಗೊಳಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ತೊರೆಬೀದಿಯಲ್ಲಿ ಸುನಿತಾ ಎಂಬುವರ ಪುತ್ರಿ ಸೌಮ್ಯ ಎಂಬವರಿಗೆ ನಾಯಿ ಕಾಲಿಗೆ ಕಚ್ಚಿ ಗಂಭೀರ ಗಾಯ ಉಂಟಾಗಿದೆ.
ಗಾಯಾಳು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಪೊನ್ನಂಪೇಟೆಯಲ್ಲಿ ಮಿತಿಮೀರಿದ ಬೀದಿ ನಾಯಿಗಳು ಎಲ್ಲಾ ಮೀನು ಮತ್ತು ಮಾಂಸ ಅಂಗಡಿಗಳ ಮುಂಭಾಗ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದು, ಬೆಳಂಬೆಳ್ಳಗೆ ನಾಯಿಗಳೆಲ್ಲ ಆಹಾರ ಆರಿಸಿ ಪಟ್ಟಣದ ಬೀದಿಬೀದಿಗಳಲ್ಲಿ ಸಂಚರಿಸುವ ದೃಶ್ಯ ಸರ್ವೇಸಾಮಾನ್ಯವಾಗಿದೆ. ಪಟ್ಟಣ ಪಂಚಾಯಿತಿಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರು ಕೂಡ ಯಾವುದೇ ರೀತಿಯ ಸ್ಪಂದನೆ ದೊರಕುತ್ತಿಲ್ಲ ಎಂದು ಹಲವು ಸಾರ್ವಜನಿಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು