5:18 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ ಮಹಿಳೆ ಗಂಭೀರ ಗಾಯ

31/10/2025, 22:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆಯಲ್ಲಿ ಬೆಳಿಗ್ಗೆ ಅಂಗನವಾಡಿಗೆ ತೆರಳುತ್ತಿದ್ದ ಮಗುವಿಗೆ ಬೀದಿ ನಾಯಿಯೊಂದು ಕಚ್ಚಿ ಗಾಯಗೊಳಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ತೊರೆಬೀದಿಯಲ್ಲಿ ಸುನಿತಾ ಎಂಬುವರ ಪುತ್ರಿ ಸೌಮ್ಯ ಎಂಬವರಿಗೆ ನಾಯಿ ಕಾಲಿಗೆ ಕಚ್ಚಿ ಗಂಭೀರ ಗಾಯ ಉಂಟಾಗಿದೆ.
ಗಾಯಾಳು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಪೊನ್ನಂಪೇಟೆಯಲ್ಲಿ ಮಿತಿಮೀರಿದ ಬೀದಿ ನಾಯಿಗಳು ಎಲ್ಲಾ ಮೀನು ಮತ್ತು ಮಾಂಸ ಅಂಗಡಿಗಳ ಮುಂಭಾಗ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದು, ಬೆಳಂಬೆಳ್ಳಗೆ ನಾಯಿಗಳೆಲ್ಲ ಆಹಾರ ಆರಿಸಿ ಪಟ್ಟಣದ ಬೀದಿಬೀದಿಗಳಲ್ಲಿ ಸಂಚರಿಸುವ ದೃಶ್ಯ ಸರ್ವೇಸಾಮಾನ್ಯವಾಗಿದೆ. ಪಟ್ಟಣ ಪಂಚಾಯಿತಿಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರು ಕೂಡ ಯಾವುದೇ ರೀತಿಯ ಸ್ಪಂದನೆ ದೊರಕುತ್ತಿಲ್ಲ ಎಂದು ಹಲವು ಸಾರ್ವಜನಿಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು