11:02 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ ಮಹಿಳೆ ಗಂಭೀರ ಗಾಯ

31/10/2025, 22:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆಯಲ್ಲಿ ಬೆಳಿಗ್ಗೆ ಅಂಗನವಾಡಿಗೆ ತೆರಳುತ್ತಿದ್ದ ಮಗುವಿಗೆ ಬೀದಿ ನಾಯಿಯೊಂದು ಕಚ್ಚಿ ಗಾಯಗೊಳಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ತೊರೆಬೀದಿಯಲ್ಲಿ ಸುನಿತಾ ಎಂಬುವರ ಪುತ್ರಿ ಸೌಮ್ಯ ಎಂಬವರಿಗೆ ನಾಯಿ ಕಾಲಿಗೆ ಕಚ್ಚಿ ಗಂಭೀರ ಗಾಯ ಉಂಟಾಗಿದೆ.
ಗಾಯಾಳು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಪೊನ್ನಂಪೇಟೆಯಲ್ಲಿ ಮಿತಿಮೀರಿದ ಬೀದಿ ನಾಯಿಗಳು ಎಲ್ಲಾ ಮೀನು ಮತ್ತು ಮಾಂಸ ಅಂಗಡಿಗಳ ಮುಂಭಾಗ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದು, ಬೆಳಂಬೆಳ್ಳಗೆ ನಾಯಿಗಳೆಲ್ಲ ಆಹಾರ ಆರಿಸಿ ಪಟ್ಟಣದ ಬೀದಿಬೀದಿಗಳಲ್ಲಿ ಸಂಚರಿಸುವ ದೃಶ್ಯ ಸರ್ವೇಸಾಮಾನ್ಯವಾಗಿದೆ. ಪಟ್ಟಣ ಪಂಚಾಯಿತಿಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರು ಕೂಡ ಯಾವುದೇ ರೀತಿಯ ಸ್ಪಂದನೆ ದೊರಕುತ್ತಿಲ್ಲ ಎಂದು ಹಲವು ಸಾರ್ವಜನಿಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು