4:20 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

Kodagu | ಸುಂಟಿಕೊಪ್ಪ; ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿದ ಮೂವರು ಮಹಿಳೆಯರು

15/09/2025, 10:44

ಗಿರಿಧರ್ ಕೊಂಪುಳಿರ ಮಡಿಕೇರಿ

info.repprterkarnataka@gmail.com

ಚಿನ್ನ ಖರೀದಿಸುವ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದ ಮೂವರು ಮಹಿಳೆಯರು ಕ್ಷಣಾರ್ಧದಲ್ಲಿ ಚಿನ್ನದ ಸರವನ್ನು ಕದ್ದೋಯ್ದ ಘಟನೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನಡೆದಿದೆ.
ಸುಂಟಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ಫ್ಯಾಷನ್ ಜ್ಯುವೆಲ್ಲರಿ ಶಾಪ್ ನಲ್ಲಿ ಕಳ್ಳಿಯರು ಕರಾಮತ್ತನ್ನು ತೋರಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ.


ನೆನ್ನೆ ಸಂಜೆ 5 ಗಂಟೆ ಸಮಯದಲ್ಲಿ ಈ ಚಿನ್ನದ ಅಂಗಡಿಗೆ ಮಗುವಿನೊಂದಿಗೆ ಬಂದಿದ್ದ ಮೂವರು ಮಹಿಳೆಯರು ಚಿನ್ನದ ಆಭರಣ ಖರೀದಿಸುವ ನಾಟಕವಾಡಿದ್ದಾರೆ. ಅಂಗಡಿಯವರ ಅರಿವಿಗೆ ಬಾರದಂತೆ ಕ್ಷಣಾರ್ಧದಲ್ಲಿ ಕೈಚಳಕ ತೋರಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ರಾತ್ರಿ 9.30 ರ ಸಮಯದಲ್ಲಿ ಸ್ಟಾಕ್ ಚೆಕ್ ಮಾಡುವಾಗ ಚಿನ್ನದ ಸರ ಕಳ್ಳತನ
ಆಗಿರುವುದು ಅರಿವಿಗೆ ಬಂದಿದೆ.
CC TV ಚೆಕ್ ಮಾಡುವಾಗ ಈ ಮಹಿಳೆಯರ ಕರಾಮತ್ತು ಸೆರೆಯಾಗಿರುವುದು ಕಂಡು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು