5:08 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

Kodagu | ಟೆರರ್ ಆಫ್ ಬೆಂಗಾಲ್ ಇನ್ ಕುಶಾಲನಗರ !: ಚಂದಕ್ಕೆ ಪೂರಕ , ಆರೋಗ್ಯಕ್ಕೆ ಬಲು ಮಾರಕ!!

02/07/2025, 14:13

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಅಕ್ಷರಶಃ ಕಳೆದ ಒಂದು ವಾರದಿಂದ ಕೊಡಗಿನ ಕುಶಾಲನಗರ -ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿ 275 ಬದಿಯಲ್ಲಿರುವ ಕುಶಾಲನಗರದ ತಾವರೆಕೆರೆಯಲ್ಲಿ ಅರಳಿ ನಿಂತಿರುವ ಲ್ಯಾವೆಂಡರ್/ ಬ್ಲೂ ವಾಯಿಲೆಟ್ ಬಣ್ಣದ ಹೂವು ಅಕ್ಷರಶಃ ಮಾರಕವಾಗಿದೆ. ವೈಜ್ಞಾನಿಕವಾಗಿ ನೋಡುವುದಾದರೆ ಇದೊಂದು ತ್ಯಾಜ್ಯದಿಂದ ಉದ್ಭವಿಸುವ ಒಂದು ಕಳೆಯಿಂದ ಅರಳಿರುವ ಸಸ್ಯ ಪ್ರಭೇಧ.”ಇಚ್ಹೊರ್ನಿಯಾ ಕ್ರೇಸ್ಸಿಪಿಸ್” ಹೆಸರಿನ ಈ ಕಳೆ ಬಾಂಗ್ಲಾದೇಶದಲ್ಲಿ ನಿಂತ ನೀರು, ಅದರಿಂದ ಉದ್ಭವ ಆಗುತ್ತಿದ್ದ ಸೊಳ್ಳೆ ಸೇರಿದಂತೆ ಕ್ರಿಮಿ ಕೀಟದಿಂದ ರೋಗ ರುಜಿನ ಉಂಟಾಗಿತ್ತು, ಸ್ವಲ್ಪ ನೀರಿನ ಸೆಲೆ ಸಿಕ್ಕರೆ ಸಾಕು ಅಲ್ಲಿ ಇದರ ಬೇರು ಕ್ಷಣಾರ್ಧದಲ್ಲಿ ಹಬ್ಬುವ ತಾಕತ್ತು ಇದಕ್ಕಿದೆ, ಮತ್ತೆ ಈ ತ್ಯಾಜ್ಯದ ಗಿಡ ನೀರಿನಲ್ಲಿನಲ್ಲಿರುವ ಜಲಚರ ಜೀವಿಗಳು(ಮೀನುಗಳು, ಆಮೆ, ಕಪ್ಪೆ), ತಾವರೆ, ವಾಟರ್ ಲಿಲ್ಲಿ ಯಂತಹ ಸೂಕ್ಷ್ಮ ಜೀವಿಗಳಿಗೆ ಆಮ್ಲಜನಕ ತಡೆಯುವ ಸಾಮರ್ಥ್ಯ ಹೊಂದಿದೆ. ಸಹಜವಾಗಿ ಇದರ ಎಲೆಗಳು ಸೂರ್ಯನ ಕಿರಣ ತಡೆಯುವ ಸಾಮರ್ಥ್ಯ ಹೊಂದಿದ್ದು, ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ತಡೆಯುತ್ತದೆ ಎಂದು ದೃಢಪಟ್ಟಿದೆ. ಒಂದು ವೇಳೆ ಇದು ಹಬ್ಬಿದ್ದಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ತಾವರೆಕೆರೆ ಒಂದು ರೋಗ ಗುಂಡಿ ಆಗುವುದರಲ್ಲಿ ಸಂಶಯವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು