10:03 AM Saturday19 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

Kodagu | ಟೆರರ್ ಆಫ್ ಬೆಂಗಾಲ್ ಇನ್ ಕುಶಾಲನಗರ !: ಚಂದಕ್ಕೆ ಪೂರಕ , ಆರೋಗ್ಯಕ್ಕೆ ಬಲು ಮಾರಕ!!

02/07/2025, 14:13

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಅಕ್ಷರಶಃ ಕಳೆದ ಒಂದು ವಾರದಿಂದ ಕೊಡಗಿನ ಕುಶಾಲನಗರ -ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿ 275 ಬದಿಯಲ್ಲಿರುವ ಕುಶಾಲನಗರದ ತಾವರೆಕೆರೆಯಲ್ಲಿ ಅರಳಿ ನಿಂತಿರುವ ಲ್ಯಾವೆಂಡರ್/ ಬ್ಲೂ ವಾಯಿಲೆಟ್ ಬಣ್ಣದ ಹೂವು ಅಕ್ಷರಶಃ ಮಾರಕವಾಗಿದೆ. ವೈಜ್ಞಾನಿಕವಾಗಿ ನೋಡುವುದಾದರೆ ಇದೊಂದು ತ್ಯಾಜ್ಯದಿಂದ ಉದ್ಭವಿಸುವ ಒಂದು ಕಳೆಯಿಂದ ಅರಳಿರುವ ಸಸ್ಯ ಪ್ರಭೇಧ.”ಇಚ್ಹೊರ್ನಿಯಾ ಕ್ರೇಸ್ಸಿಪಿಸ್” ಹೆಸರಿನ ಈ ಕಳೆ ಬಾಂಗ್ಲಾದೇಶದಲ್ಲಿ ನಿಂತ ನೀರು, ಅದರಿಂದ ಉದ್ಭವ ಆಗುತ್ತಿದ್ದ ಸೊಳ್ಳೆ ಸೇರಿದಂತೆ ಕ್ರಿಮಿ ಕೀಟದಿಂದ ರೋಗ ರುಜಿನ ಉಂಟಾಗಿತ್ತು, ಸ್ವಲ್ಪ ನೀರಿನ ಸೆಲೆ ಸಿಕ್ಕರೆ ಸಾಕು ಅಲ್ಲಿ ಇದರ ಬೇರು ಕ್ಷಣಾರ್ಧದಲ್ಲಿ ಹಬ್ಬುವ ತಾಕತ್ತು ಇದಕ್ಕಿದೆ, ಮತ್ತೆ ಈ ತ್ಯಾಜ್ಯದ ಗಿಡ ನೀರಿನಲ್ಲಿನಲ್ಲಿರುವ ಜಲಚರ ಜೀವಿಗಳು(ಮೀನುಗಳು, ಆಮೆ, ಕಪ್ಪೆ), ತಾವರೆ, ವಾಟರ್ ಲಿಲ್ಲಿ ಯಂತಹ ಸೂಕ್ಷ್ಮ ಜೀವಿಗಳಿಗೆ ಆಮ್ಲಜನಕ ತಡೆಯುವ ಸಾಮರ್ಥ್ಯ ಹೊಂದಿದೆ. ಸಹಜವಾಗಿ ಇದರ ಎಲೆಗಳು ಸೂರ್ಯನ ಕಿರಣ ತಡೆಯುವ ಸಾಮರ್ಥ್ಯ ಹೊಂದಿದ್ದು, ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ತಡೆಯುತ್ತದೆ ಎಂದು ದೃಢಪಟ್ಟಿದೆ. ಒಂದು ವೇಳೆ ಇದು ಹಬ್ಬಿದ್ದಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ತಾವರೆಕೆರೆ ಒಂದು ರೋಗ ಗುಂಡಿ ಆಗುವುದರಲ್ಲಿ ಸಂಶಯವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು